nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ

    November 5, 2025

    ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ

    November 5, 2025
    Facebook Twitter Instagram
    ಟ್ರೆಂಡಿಂಗ್
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    • ಬೀದರ್‌ | ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
    • ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾರ್ವತಮ್ಮ ಮತ್ತು ಪುನೀತ್ ರಾಜ್‍ ಕುಮಾರ್ ಸ್ಮರಣಾರ್ಥ 2 ಚಿನ್ನದ ಪದಕ ಘೋಷಣೆ
    ರಾಜ್ಯ ಸುದ್ದಿ March 22, 2022

    ಪಾರ್ವತಮ್ಮ ಮತ್ತು ಪುನೀತ್ ರಾಜ್‍ ಕುಮಾರ್ ಸ್ಮರಣಾರ್ಥ 2 ಚಿನ್ನದ ಪದಕ ಘೋಷಣೆ

    ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ‘ಅಪ್ಪು’ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು.
    By adminMarch 22, 2022No Comments2 Mins Read
    puneeth rajkumar

    ಮೈಸೂರು: ಡಾ. ಪುನೀತ್ ರಾಜ್‍ ಕುಮಾರ್ (Puneeth Rajkumar)..‌. ಈ ಹೆಸರು ಪ್ರತಿಯೊಬ್ಬರ ಉಸಿರು. ‘ಅಪ್ಪು’ ಮಾಡಿದ ಸಾಧನೆಗೆ ಇದೀಗ ಡಾಕ್ಟರೇಟ್‌ ನೀಡಿ ಗೌರವಿಸಲಾಗಿದೆ. ಈ ಮೂಲಕ ‘ಕರುನಾಡ ರತ್ನ’ವನ್ನು ಮತ್ತೊಮ್ಮೆ ನೆನೆಯಲಾಗಿದೆ.

    ಮೈಸೂರು ವಿವಿ 102ನೇ ಘಟಿಕೋತ್ಸವ(102nd Convocation of University of Mysore)ದಲ್ಲಿ ನಟ ಪುನೀತ್ ರಾಜ್‍ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು.


    Provided by
    Provided by

    ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್(Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್ ಕುಟುಂಬವೇ ಹಾಜರಿತ್ತು. ಈ ವೇಳೆ ಪ್ರತಿಯೊಬ್ಬರೂ ಭಾವುಕರಾಗಿ ಅಗಲಿದ ‘ಕರುನಾಡ ರತ್ನ’ವನ್ನು ನೆನೆದರು. ಗಣ್ಯರ ಸಾಲಿನಲ್ಲಿ ಕುಳಿತುಕೊಂಡಿದ್ದ ಪುನೀತ್ ರಾಜ್‍ ಕುಮಾರ್ ಸಹೋದರಿಯರು, ‘ಅಪ್ಪು’ ಪರವಾಗಿ ಅವರ ಪತ್ನಿ ಅಶ್ವಿನಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವಾಗ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು.

    ಈ ವಿಶೇಷ ಸಂದರ್ಭದಲ್ಲಿ ವರನಟ ಡಾ.ರಾಜ್ ಕುಮಾರ್ ಕುಟುಂಬದಿಂದ 2 ಚಿನ್ನದ ಪದಕ(Gold Medals)ಘೋಷಣೆ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಂದ ಎರಡು ಬಂಗಾರದ ಪದಕ ಘೋಷಣೆ ಮಾಡಿದ್ದು, ಬಿಸಿನೆಸ್ ಮ್ಯಾನೆಜ್‌ ಮೆಂಟ್‌ ಮತ್ತು ಲಲಿತಾಕಲಾ ವಿಭಾಗಕ್ಕೆ 1 ಚಿನ್ನದ ಪದಕ ಘೋಷಣೆಯಾಗಿದೆ. ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಬಿಸಿನೆಸ್‌ ಮ್ಯಾನೆಜ್‌ ಮೆಂಟ್‌ ವಿಭಾಗಕ್ಕೆ ಚಿನ್ನದ ಪದಕ ಮತ್ತು ಪುನೀತ್ ರಾಜ್‍ ಕುಮಾರ್ ಹೆಸರಿನಲ್ಲಿ ಲಲಿತಾಕಲಾ ವಿಭಾಗಕ್ಕೆ ಚಿನ್ನದ ಪದಕ ನೀಡಲಾಗಿದ್ದು, 2 ಚಿನ್ನದ ಪದಕವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರೇ ವಿತರಿಸಲಿದ್ದಾರೆ.

    ಇನ್ನು ಮೈಸೂರು ವಿವಿ ಘಟಿಕೋತ್ಸವ(Mysore University Convocation)ದಲ್ಲಿ ನಟ ರಾಘವೇಂದ್ರ ರಾಜ್‍ಕುಮಾರ್ ಮಾತನಾಡಿ, ‘ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣಿಸುತ್ತಿಲ್ಲ, ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಎಂದು ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್‌ ನಮ್ಮ ಕುಟುಂಬದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ’ ಎಂದು ಹೇಳಿದರು.ಕರುನಾಡಿನ ‘ಅಪ್ಪು’ ಇನ್ಮುಂದೆ ಡಾ.ಪುನೀತ್‌ ರಾಜ್‍ಕುಮಾರ್(Dr Puneeth Rajkumar). ನಮ್ಮ ನಿಮ್ಮೆಲ್ಲರ ಪ್ರೀತಿಯ ‘ಅಪ್ಪು’ಗೆ ಡಾಕ್ಷರೇಟ್‌ ಗೌರವ ಸಿಕ್ಕಿರೋದು ಅಭಿಮಾನಿಗಳಿಗೆ ಸಂತಸ ಕೊಟ್ಟಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    ಚೇಳೂರು: ಚೇಳೂರಿನ ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ನವೆಂಬರ್ 10 ರಂದು ನಡೆಯಲಿದೆ. ಅಂದು ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ,…

    ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ

    November 5, 2025

    ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ

    November 5, 2025

    ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.