ತುರುವೇಕೆರೆ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಸಾರಿಗೆಹಳ್ಳಿಯಲ್ಲಿ ನಡೆದಿದೆ.
ಯೋಗಾನಂದ (45) ಎಂಬ ವ್ಯಕ್ತಿ ಬೆಳಿಗ್ಗೆ 7:30ರ ಹೊತ್ತಿಗೆ ಹೆಂಡತಿ ಮತ್ತು ಮಗುವಿನ ಜೊತೆ ಈಜಲು ಹೋಗಿದ್ದು, ಈಜಲಾಗದೆ, ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ತುರುವೇಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿಗಳು ನೀರಿನಿಂದ ಶವವನ್ನು ಹೊರ ತೆಗೆದಿದ್ದಾರೆ. ಈ ವೇಳೆ ದಂಡಿನ ಶಿವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz