ಕೊರಟಗೆರೆ: ಪಟ್ಟಣದ ಪತ್ರಕರ್ತರ ಭವನದಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅದ್ದೂರಿಯಿಂದ ಕೊರಟಗೆರೆಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯ್ತಿಯ ಅಧ್ಯಕ್ಷೆ ಕಾವ್ಯ ರಮೇಶ್, ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಅವರ ಸಂಘಟನೆ ಅವಶ್ಯಕವಾಗಿದೆ . ಸಮಾಜದ ಒಳಿತಿಗೆ ಶ್ರಮಿಸುವ ಮಾಧ್ಯಮದವರಿಗೆ ಅಗತ್ಯ ರೀತಿಯ ಸೌಕರ್ಯ ಮತ್ತು ಸವಲತ್ತುಗಳನ್ನು ನೀಡುವುದು ಸರ್ಕಾರಗಳ ಕರ್ತವ್ಯವಾಗಿದೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಾವುದೇ ಸಂಬಳ ಇರುವುದಿಲ್ಲ ಆದ್ದರಿಂದ ಸರ್ಕಾರ ಗ್ರಾಮೀಣ ಭಾಗದ ಪತ್ರಕರ್ತರಿಗೆ ಸೇರಬೇಕಾದ ಸವಲತ್ತುಗಳನ್ನು ಆದಷ್ಟು ಬೇಗ ನೀಡಲಿ ಎಂಬುದೇ ನಮ್ಮ ಆಶಯ ಎಂದರು.
ನಿರ್ದೇಶಕರಾಗಿ ಆಯ್ಕೆಯಾಗಿರುವ ವಿಜೇತರಾಗಿರುವ ಟಿ.ಎಸ್. ಕೃಷ್ಣಮೂರ್ತಿ ಮಾತನಾಡಿ, ಈ ಬಾರಿಯ ಜಿಲ್ಲಾ ಪತ್ರಕರ್ತರ ಚುನಾವಣೆಯಲ್ಲಿ ಅತಿ ಹೆಚ್ಚು ಗ್ರಾಮೀಣ ಭಾಗದ ಪತ್ರಕರ್ತರು ವಿಜೇತರಾಗಿದ್ದಾರೆ. ಇದು ಒಳ್ಳೆಯ ವಿಷಯವೇ ಎಲ್ಲಾ ಗ್ರಾಮೀಣ ಪತ್ರಕರ್ತರಿಗೆ ಸರ್ಕಾರ ಹಾಗೂ ಅಧಿಕಾರಿಗಳಿಂದ ಸಲ್ಲಬೇಕಾಗಿರುವ ಸೌಕರ್ಯಗಳನ್ನು ಒದಗಿಸುವಲ್ಲಿ ಈ ಬಾರಿ ನಮ್ಮ ಪ್ರಾಮಾಣಿಕ ಪ್ರಯತ್ನವನ್ನು ಮೀರಿ ಪ್ರಯತ್ನಿಸುತ್ತಿವೆ. ಹಾಗೆಯೇ ಪ್ರತಿ ಬಜೆಟ್ ನಲ್ಲೂ ಸರ್ಕಾರ ಪತ್ರಕರ್ತರಿಗೆ ಪ್ರತ್ಯೇಕ ಬಜೆಟ್ ಘೋಷಣೆ ಮಾಡಬೇಕು. ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ಗಳಲ್ಲಿ ಸಿಗುವ ವಿಶೇಷ ಅನುದಾನದಲ್ಲಿ ಪತ್ರಕರ್ತರಿಗೂ ಮೀಸಲಿಡಬೇಕು ಎಂದು ತಿಳಿಸಿದರು .
ತಾಲ್ಲೂಕು ಪತ್ರಕರ್ತರ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ನಮ್ಮ ತಾಲ್ಲೂಕಿನ ಪತ್ರಕರ್ತರಲ್ಲಿ ಒಗ್ಗಟ್ಟಿನ ಬಲವಿದೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ, ಒಗ್ಗಟ್ಟಿನಿಂದ ತೆಗೆದುಕೊಳ್ಳುತ್ತೇವೆ. ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನಮ್ಮ ತಾಲ್ಲೂಕಿನ ಪತ್ರಕರ್ತರು ಅವರದ್ದೇ ಆದ ಪ್ರತ್ಯೇಕ ವೃತ್ತಿಯನ್ನು ವೃತ್ತಿಯ ಜತೆಗೆ ಸಾಮಾಜಿಕ ಧಾರ್ಮಿಕ ಸೇವೆಗಳನ್ನು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ಒಗ್ಗಟ್ಟಿನ ಬಲವನ್ನು ತೋರಿಸಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಪತ್ರಕರ್ತರ ಸಂಘಟನೆಯ ಬಲದೊಂದಿಗೆ ನಮ್ಮ ಗ್ರಾಮೀಣ ಭಾಗದ ಪತ್ರಕರ್ತರಿಗೆ ಸಿಗುವ ಸೌಲಭ್ಯಗಳನ್ನು ಒದಗಿಸುವಲ್ಲಿ ನನ್ನ ಎಲ್ಲ ಪ್ರಯತ್ನವನ್ನು ಮಾಡುತ್ತೇನೆ ಎಂದು ತಿಳಿಸಿದರು .
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB