nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ
    ತುಮಕೂರು April 14, 2022

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ

    By adminApril 14, 2022No Comments2 Mins Read
    pathrakartha

    ತುಮಕೂರು: ಕಳೆದ ಫೆಬ್ರವರಿ ಮಾಹೆಯಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ (ತುಮಕೂರು ಜಿಲ್ಲಾ ಘಟಕ)ಚುನಾಯಿತರಾದ ಪದಾಧಿಕಾರಿಗಳಿಗೆ ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರ ವಿತರಣೆ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

    ತುಮಕೂರಿನ ಪತ್ರಿಕಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚುನಾವಣೆಯಲ್ಲಿ ಚುನಾಯಿತರಾದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.


    Provided by
    Provided by

    ಇನ್ನೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಚುನಾವಣಾಧಿಕಾರಿಗಳಾದ ನಿವೃತ್ತ ಡಿವೈಎಸ್ಪಿ ಜಗದೀಶ್ ,ಚಂದ್ರಪ್ಪ ಸೇರಿದಂತೆ ಇತರೆ  ಚುನಾವಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

    pathrakartha

    ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ಚಿ. ನಿ ಪುರುಷೋತ್ತಮ್,  ಮುಂದಿನ ದಿನದಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನವನ್ನು ಮಾದರಿ ಪತ್ರಿಕಾ ಭವನವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮುಂದಿನ ದಿನದಲ್ಲಿ ಪಾಲಿಕೆ ವತಿಯಿಂದ ಹಾಗೂ ತುಮಕೂರು ನಗರ ಶಾಸಕರು ಹಾಗೂ ಸಂಸದರ ಸಹಕಾರದೊಂದಿಗೆ ಪತ್ರಿಕಾ ಭವನವನ್ನ ನವೀಕರಿಸಲಾಗುವುದು ಇದಕ್ಕೆ ಸಂಬಂಧಿಸಿದಂತೆ ನವೀಕರಣ ಪ್ರಕ್ರಿಯೆಯು ಟೆಂಡರ್ ಹಂತದಲ್ಲಿದ್ದು, ಶೀಘ್ರವೇ ಪತ್ರಿಕಾ ಭವನ ನವೀಕರಣ ಮಾಡಲಾಗುವುದು ಎಂದರು.

    ಮುಂದಿನ ದಿನದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪತ್ರಕರ್ತರಿಗೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ,ಹಿರಿಯ ಪತ್ರಕರ್ತರ ಸಲಹೆ-ಸೂಚನೆಗಳನ್ನು ಪಡೆದು ಸಂಘವನ್ನು ಮುನ್ನಡೆಸಿಕೊಂಡು ಹೋಗಲು ಜಿಲ್ಲೆಯ ಎಲ್ಲ ಪತ್ರಕರ್ತರ ಸಹಕಾರ ಅತ್ಯಗತ್ಯ ಎಂದರು.

    ಮುಂದಿನ ದಿನದಲ್ಲಿ ನಿವೇಶನ ಇಲ್ಲದ ಪತ್ರಕರ್ತರಿಗೆ ನಿವೇಶನ ಸಿಗಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು, ಇನ್ನು ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ  ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದರು.

    ಇನ್ನು ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಚಿಕ್ಕಿರಪ್ಪ ,ಶ್ಯಾ ನ ಪ್ರಸನ್ನ ಮೂರ್ತಿ, ತಿಪಟೂರು ಕೃಷ್ಣ, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಕಾರ್ಯದರ್ಶಿಗಳಾದ ಕೊರಟಗೆರೆ ರಂಗಧಾಮಯ್ಯ, ಸತೀಶ್ ಹಾರೋಗೆರೆ, ದಶರಥ, ಖಜಾಂಚಿ ದೇವಪ್ರಕಾಶ್, ನಿರ್ದೇಶಕರುಗಳಾದ ಟಿ.ಎಸ್ ಕೃಷ್ಣಮೂರ್ತಿ, ಮಂಜುನಾಥ ತಾಳ, ನರಸಿಂಹಮೂರ್ತಿ, ನಂದೀಶ್, ಹೆಚ್.ಎಸ್ ಪರಮೇಶ್, ಪ್ರಸನ್ನ ದೊಡ್ಡಗುಣಿ ,ಮಂಜುನಾಥ್ ಹಾಲ್ಕುರಿಕೆ ,ಯಶಸ್ .ಕೆ. ಪದ್ಮನಾಭ , ಸಿ.ಜಯಣ್ಣ, ಎಸ್.ಡಿ ಚಿಕ್ಕಣ್ಣ ,ಬೈರೇಶ್  ನಾಗೇಂದ್ರಪ್ಪ, ಎಚ್.ಎನ್.ಶಂಕರ್ ಸಿರಾ, ನಾಗರಾಜು, ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಜಿಲ್ಲೆಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    December 10, 2025

    ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ

    December 9, 2025

    ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ: ಕುಮಾರಸ್ವಾಮಿ ಹೇಳಿಕೆಗೆ ಸಿಪಿಎಂ ಖಂಡನೆ

    December 9, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.