ಪಾವಗಡ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ತುಮಕೂರು ಜಿಲ್ಲಾ ಘಟಕದ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಹಾಗೂ ಗೆಲುವಿನ ನಗೆ ಬೀರಿದ ಹಿರಿಯ ಪತ್ರಕರ್ತರಿಗೆ ಇಂದು ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು
ತೀವ್ರ ಕುತೂಹಲಕ್ಜೆ ಎಡೆ ಮಾಡಿ ಕೊಟ್ಟಿದ್ದ ಜಿದ್ದಾ ಜಿದ್ದಿನ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಾವಗಡ ತಾಲ್ಲೂಕಿನ ಹಿರಿಯ ಪತ್ರಕರ್ತ ಶ್ಯಾನ ಪ್ರಸನ್ನಮೂರ್ತಿ ಹಾಗೂ ನಿರ್ದೇಶಕರ ಸ್ಥಾನಕ್ಕೆ ಹೊಸದಿಗಂತ ಪತ್ರಿಕಾ ವರದಿಗಾರ ನಾಗೇಂದ್ರ ಅವರಿಗೆ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಶಾಲು ಹೊದಿಸಿ ಹೂಮಾಲೆ ಹಾಕಿ, ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಈ ಸರಳ ಕಾರ್ಯಕ್ರಮದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಗೌತಮ್ ಕ್ರಾಂತಿ, ಶ್ರೀಕಾಂತ್, ರಾಕೇಶ್, ವೆಂಕಟೇಶ್, ನರೇಶ್, ಸಾಗರ್, ಸಾಯಿ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.