ಪಾವಗಡ: ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯಿಂದ ಆಂಧ್ರಪ್ರದೇಶಕ್ಕೆ ಹಾದುಹೋಗುವ ರಸ್ತೆಯ ಗಡಿಯಾದ ನಾಗಲಾಪುರ ಗೇಟ್ ಬಳಿ ನಿರ್ಮಿಸಿರುವ ತಾತ್ಕಾಲಿಕ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಬುಧವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದು, ಪಕ್ಕದ ಆಂಧ್ರಪ್ರದೇಶದಿಂದ ವೈ.ಎನ್.ಹೊಸಕೋಟೆ ಹೋಬಳಿಯ ಮೂಲಕ ರಾಜ್ಯಕ್ಕೆ ಅಕ್ರಮ ಸಾಗಾಣಿಕೆ ತಡೆಯುವಲ್ಲಿ ಈ ಚೆಕ್ ಪೋಸ್ಟ್ ಪ್ರಮುಖವಾಗಿದೆ. ಅದರಂತೆ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕ ಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯದಿಂದಲೂ ಮಧ್ಯ ಇನ್ನಿತರೆ ರವಾನೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾಗಲಾಪುರ ಚೆಕ್ ಪೋಸ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ , ಡಿಓಎಸ್ ಪಿ ರಾಮಕೃಷ್ಣಪ್ಪ, ಚುನಾವಣಾ ಶಿರಸ್ತೇದಾರ್ ಪ್ರತಾಪ್ ಕುಮಾರ್, ತಹಶೀಲ್ದಾರ್ ಸಂತೋಷ್ ಕುಮಾರ್, ಎಇಇ ಹನುಮಂತರಾಯಪ್ಪ, ಸಿಪಿಐ ಗಿರೀಶ್ ಸಹಾಯಕ ಚುನಾವಣಾಧಿಕಾರಿಗಳು ವಿಜಯ್ ಕುಮಾರ್ ಮಟ್ಟೆ, ಗ್ರಾಮ ಆಡಳಿತಾಧಿಕಾರಿ ರಘುವೀರ್ ಸೇರಿದಂತೆ ಕಂದಾಯ, ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ತಂಡದಲ್ಲಿ ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296