ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ಮುಖ್ಯ ಶಿಕ್ಷಕ ರಾಜಣ್ಣ ಎಸ್. ಮಾತನಾಡಿ, ಅನೇಕ ಮಹನೀಯರ ಹೋರಾಟ ತ್ಯಾಗ ಬಲಿದಾನದಿಂದ ಭಾರತಕ್ಕೆ ಬ್ರಿಟೀಷರಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ. ಭವ್ಯ ಭಾರತಕ್ಕಾಗಿ ಪ್ರತಿಯೊಬ್ಬರು ಸಂಕಲ್ಪ ಮಾಡಿದಾಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಓದಬೇಕು. ಭಾರತದ ಇತಿಹಾಸವನ್ನು ಅರಿತು ಬೆಳೆಯಬೇಕು. ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ವಿಶ್ವದ ನಾಯಕರನ್ನಾಗಿ ಭಾರತವನ್ನು ರೂಪಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ರಚನಾ ಸ್ಪರ್ಧೆಯಲ್ಲಿ ವಿಜೇತನಾಗಿರುವ ಶಾಲಾ ವಿದ್ಯಾರ್ಥಿಯಾದ ಜಶ್ವಂತ್ ಎಂ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅದರಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ಮುಂದಣಯನ್ನು ಸನ್ಮಾನಿಸಲಾಯಿತು.
ಶಾಲಾ ಭೂದಾನಿ ಕುಟುಂಬಸ್ಥರಾದ ಹನುಮಂತರಾಯಪ್ಪ ಮತ್ತು ಶಾಲಾ ಸಮಿತಿ ಅಧ್ಯಕ್ಷರು ಗೋಪಾಲಪ್ಪ ಈರ್ವರೂ ಸೇರಿ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಕವಾಯತು ಮೂಲಕ ಧ್ವಜ ವಂದನೆ ಸಲ್ಲಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಗಂಗೋತ್ರಿ ರಮೇಶ್ , ಉಪಾಧ್ಯಕ್ಷರು ಮಾರುತಿ ಪ್ರಸಾದ್, ಪಿಡಿಓ ಜಯಣ್ಣ, ಕಾರ್ಯದರ್ಶಿ ಅಪರ್ಣ, ಶಿಕ್ಷಕರಾದ ಭೂತೇಶ್, ಎ ಎಸ್ ರಘು, ಸೋಮಶೇಖರ್, ಮಧು, ಹನುಮಂತರಾಯಪ್ಪ. ಶ್ರೀರಾಮ್, ಪರಶುರಾಮ, ಹೆಚ್.ಲಲಿತಮ್ಮ ಮತ್ತು ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q