ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ಹೊಸಹಳ್ಳಿ ತಾಂಡಾದಲ್ಲಿ ಶನಿವಾರ ಸಂಜೆ 6 ಗಂಟೆಯಲ್ಲಿ ಬೀದಿ ನಾಯಿಗಳ ದಾಳಿಗೆ ಸುಮಾರು 12 ಕುರಿ ಮರಿಗಳು ಸಾವನ್ನಪ್ಪಿವೆ.
ಗ್ರಾಮದ ಕಸನ ನಾಯಕ ಎನ್ನುವವರಿಗೆ ಸೇರಿದ 12 ಕುರಿ ಮರಿಗಳು ಮೇಲೆ 5 ನಾಯಿಗಳು ದಾಳಿ ನಡೆಸಿದ್ದು, 12 ಕುರಿ ಮರಿಗಳು ಸಹ ಸ್ಥಳದಲ್ಲಿಯೇ ಮೃತಪಟ್ಟಿವೆ.
ಇತ್ತೀಚಿಗೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗ ಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದು, ಕುರಿಮರಿಗಳಿಂದ ನಷ್ಟಕ್ಕೊಳಗಾದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂದಿದೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW