nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ

    January 27, 2026

    ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್

    January 27, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ
    • ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ
    • ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್
    • ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ
    • ಕೋಲಾರ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ರೈತ ಸಂಘದ ಜಿಲ್ಲಾಧ್ಯಕ್ಷನ ಬಂಧನ
    • ಮೃತ್ಯುಕೂಪವಾಗ್ತಿದ್ಯಾ ತುಮಕೂರು ರಾಷ್ಟ್ರೀಯ ಹೆದ್ದಾರಿ? ಒಂದೇ ತಿಂಗಳಲ್ಲಿ 15 ಮಂದಿ ಸಾವು!
    • ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಡಿಸಿಎಂ ಡಿ.ಕೆ.ಶಿವಕುಮಾರ್
    • ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ
    ಪಾವಗಡ January 27, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    By adminJanuary 27, 2026No Comments2 Mins Read
    pavagada

    ಪಾವಗಡ:  77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಹೆಲ್ಪ್ ಸೊಸೈಟಿ , ಸೇವಾ ಟ್ರಸ್ಟ್ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ಶ್ರೀಶಾಲಾ ಕಾನ್ವೆಂಟ್, ಅಕ್ಷಯ ಬ್ಲೂಜಂ ಶಾಲೆ, ಸಹಯೋಗದಲ್ಲಿ 1,750 ಅಡಿಗಳ ಉದ್ದದ ತಿರಂಗಾ ಯಾತ್ರೆ ಅತ್ಯಂತ ವೈಭವದಿಂದ ನೆರವೇರಿತು.

    ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜಿನ ಮುಂಭಾಗದಲ್ಲಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಶಶಿಕಿರಣ್ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ದೇಶಪ್ರೇಮ ಮೂಡಿಸಿಕೊಳ್ಳಬೇಕು, ನಮ್ಮ ದೇಶವನ್ನು ಕಾವಲು ಕಾಯುವ ಸೈನಿಕರ ಬಗ್ಗೆ ಅಭಿಮಾನ ಇಟ್ಟುಕೊಳ್ಳಬೇಕು, ಚಿತ್ರ ನಟರ ಫೋಟೋಗಳನ್ನು ಸ್ಟೇಟಸ್ ನಲ್ಲಿ ಹಾಕಿಕೊಳ್ಳದೆ ದೇಶಕ್ಕಾಗಿ ಹೋರಾಡಿದ ವೀರ ನಾಯಕರ ಫೋಟೋಗಳನ್ನು ಸ್ಟೇಟಸ್ ನಲ್ಲಿ ಹಾಕಿಕೊಂಡು ದೇಶ ಪ್ರೇಮವನ್ನು ಮೆರೆಯ ಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


    Provided by
    Provided by

    ನಂತರ ತಿರಂಗ ಯಾತ್ರೆ   ಶಿರಾ ರಸ್ತೆ,ಬಳ್ಳಾರಿ ರಸ್ತೆ, ಶನಿಮಹಾತ್ಮ ಸರ್ಕಲ್ ಮುಖಾಂತರ ಪಟ್ಟಣದ ತಾಲೂಕು ಕ್ರೀಡಾಂಗಣಕ್ಕೆ ತಿರಂಗಾ ಯಾತ್ರೆ ಆಗಮಿಸಿದಾಗ, ಶಾಸಕರಾದ ಎಚ್.ವಿ.ವೆಂಕಟೇಶ್ ಮತ್ತು ತಹಶೀಲ್ದಾರ್ ವೈ.ರವಿ, ಇ.ಓ. ಮಧುಸೂದನ್ ಮತ್ತು ಬಿ.ಇ.ಓ. ರೇಣುಕಮ್ಮ ಮತ್ತಿತರ ಅಧಿಕಾರಿಗಳು ಬರಮಾಡಿಕೊಂಡು, ಸುಮಾರು 2 km ಉದ್ದದವರೆಗೂ ಸಾಗಿದ ತಿರಂಗ ಯಾತ್ರೆಯನ್ನು  ಮುಕ್ತಾಯಗೊಳಿಸಿದರು, ಈ ವೇಳೆ ಮಾತನಾಡಿದ, ಶಾಸಕ ಎಚ್ .ವಿ. ವೆಂಕಟೇಶ್, ಇಷ್ಟೊಂದು ಬೃಹತ್ ಪ್ರಮಾಣದ ತಿರಂಗಾ ಯಾತ್ರೆಯನ್ನ ಕೈಗೊಂಡು ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುತ್ತಿರುವ ಹೆಲ್ಪ್ ಸೊಸೈಟಿಯ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮತ್ತು ತಿರಂಗಾ ಯಾತ್ರೆಯ ರೂವಾರಿಗಳಾದ ಲಕ್ಷ್ಮೀನಾರಾಯಣ ಗುಪ್ತ ಅವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು, ಮತ್ತು ತಾಲೂಕು ಆಡಳಿತದ ವತಿಯಿಂದ ಲಕ್ಷ್ಮೀನಾರಾಯಣ ಗುಪ್ತ ಮತ್ತು ಮಾನಂ ಶಶಿಕಿರಣ್ ಅವರಿಗೆ ವೇದಿಕೆಯಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

    ಈ ವೇಳೆ, ಮಾನಂ ಶಶಿಕಿರಣ್ ಸಂಧ್ಯಾ ಶಶಿಕಿರಣ್, ಶಿಕ್ಷಕಿ ಭವ್ಯ ,ಶಮಿ ವೃಕ್ಷ ಅಭಿವೃದ್ಧಿ ಸಮಿತಿಯ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸತ್ಯ ಲೋಕೇಶ್, ಪ್ರಾಂಶುಪಾಲರಾದ ನಾಗೇಂದ್ರ, ನಾಗರಾಜು, ಚಂದ್ರಶೇಖರ್ , ಉಪನ್ಯಾಸಕರಾದ ಮಲ್ಲಿಕಾರ್ಜುನ, ಶಿವಕುಮಾರ್, ಪಾಂಡುರಂಗ, ಜಗದೀಶ್, ರಾಜಗೋಪಾಲ್, ರವಿಕಾಂತ್, ಮುಖಂಡರಾದ ರೈತ ಮುಖಂಡ  ಜಿ.ನರಸಿಂಹ ರೆಡ್ಡಿ, ಚೌದರಿ, ನರಸಿಂಹ ಮೂರ್ತಿ, ಪಾವಗಡ ಪೊಲೀಸ್ ಠಾಣಾ ಸಿಪಿಐ ಸುರೇಶ್, ಗ್ರಾಮಾಂತರ ಸಿ.ಪಿ.ಐ. ಗಿರೀಶ್, ವೀರಮ್ಮನಹಳ್ಳಿ ಲೋಕೇಶ್,  ನರೇಶ್, ಮೆಡಿಕಲ್ ದೇವರಾಜ್, ನಲ್ಲಾನಿಸುರೇಂದ್ರ, ಬಿಜೆಪಿಯ ಯುವ ಅಧ್ಯಕ್ಷರಾದ ಅಶೋಕ್, ರವಿ, ನಾಯುಡು, ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಸಿಇಒ ಶ್ರೀಧರ್ ಗುಪ್ತ, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಗೋವಿಂದ, ರಘುಪತಿ ನಾಯ್ಡು, ಮಂಜುನಾಥ, ಮತ್ತಿತರರು ಇದ್ದರು.

    ವರದಿ:  ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

    January 22, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    Leave A Reply Cancel Reply

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಪಾವಗಡ:  77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಹೆಲ್ಪ್ ಸೊಸೈಟಿ , ಸೇವಾ ಟ್ರಸ್ಟ್ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ಶ್ರೀಶಾಲಾ…

    ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ

    January 27, 2026

    ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್

    January 27, 2026

    ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ

    January 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.