ಪಾವಗಡ: 2028ರ ವಿಧಾನಸಭಾ ಚುನಾವಣೆಗೆ ಪಾವಗಡ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು, ಸಮಾಜ ಸೇವಕ ಹಾಗೂ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು ಅವರು ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಳೆದ ವಾರ ಪಾವಗಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದ ಚೇತನ್ ಬಾಬು ಅವರು, ಪ್ರಯಾಣಿಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ್ದರು. ಆಗಲೇ ಸಾರ್ವಜನಿಕರಿಗೆ “ನಾನು ಚೇರ್ ವ್ಯವಸ್ಥೆ ಮಾಡಿಕೊಡುತ್ತೇನೆ” ಎಂದು ಭರವಸೆ ನೀಡಿದ್ದರು.
ನುಡಿದಂತೆ ನಡೆದ ಅವರು, ಭರವಸೆ ನೀಡಿದ ಒಂದು ವಾರದೊಳಗೆ ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುರ್ಚಿಗಳ ವ್ಯವಸ್ಥೆ ಮಾಡಿದ್ದಾರೆ. ಇಂದು ನಿಲ್ದಾಣದಲ್ಲಿ ಹೊಸ ಕುರ್ಚಿಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಚೇತನ್ ಬಾಬು, “ನಾನು ಪಾವಗಡದ ಬದಲಾವಣೆಗೆ ಬಂದಿದ್ದೇನೆ. ಜನರ ಸಣ್ಣಪುಟ್ಟ ಸಮಸ್ಯೆಗಳಿಗೂ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯ. ಮಾತು ಕೊಟ್ಟಂತೆ ನಡೆದುಕೊಳ್ಳುವುದು ನನ್ನ ಧ್ಯೇಯ” ಎಂದು ತಿಳಿಸಿದರು.
ಚೇತನ್ ಬಾಬು ಅವರ ಈ ತ್ವರಿತ ಕಾರ್ಯಕ್ಕೆ ಸ್ಥಳೀಯ ಪ್ರಯಾಣಿಕರು ಮತ್ತು ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ನಿತ್ಯ ನೂರಾರು ಜನರು ಸಂಚರಿಸುತ್ತಿದ್ದು, ಆಸನಗಳ ಕೊರತೆಯಿಂದ ವೃದ್ಧರು, ಮಹಿಳೆಯರು ಹಾಗೂ ರೋಗಿಗಳು ತೀವ್ರ ಪರದಾಡುವಂತಾಗಿತ್ತು. ಈಗ ಕುರ್ಚಿಗಳ ವ್ಯವಸ್ಥೆಯಾಗಿರುವುದರಿಂದ ಪ್ರಯಾಣಿಕರಿಗೆ ತುಂಬ ಅನುಕೂಲವಾಗಿದೆ ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




