ಸರಗೂರು: ತಾಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸರ್ವೇಯರ್, ಕಂಪ್ಯೂಟರ್ ಆಪರೇಟರ್ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ, ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಪಿಡಿಓ ಶಿಲ್ಪಾ, ಸರ್ವೇಯರ್ ಬಾಲಾಜಿ, ಡಾಟಾ ಎಂಟ್ರಿ ಆಪರೇಟರ್ ಶಿವಲಿಂಗ ಪ್ರಸಾದ್ ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚನ್ನಗುಂಡಿ ಗ್ರಾಮದ ಲಿಂಗರಾಜು ಎಂಬುವವರ ನಿವೇಶನವನ್ನು ಈ ಸ್ವತ್ತು ಮಾಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಇತರರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಸೋಮವಾರ ಪಂಚಾಯತಿ ಕಚೇರಿಯಲ್ಲಿ ಪಿಡಿಓ 8 ಸಾವಿರ ರೂ, ಸರ್ವೇಯರ್ 2 ಸಾವಿರ ರೂ. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್.ಪಿ. ಸಜಿತ್ ಮಾರ್ಗ ದರ್ಶನದ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ವಿ. ಕೃಷ್ಣಯ್ಯ, ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ರೂಪಶ್ರೀ, ಜಯರತ್ನ ದಾಳಿ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಾದ ಉಮೇಶ್, ಗುರುಪ್ರಸಾದ್, ಗೋಪಿ, ನೇತ್ರಾವತಿ, ತ್ರಿವೇಣಿ, ಕಾಂತರಾಜ್, ಪ್ರಕಾಶ್, ಮೋಹನ್ ಗೌಡ, ಶೇಖರ್, ಮೋಹನ್, ಲೋಕೇಶ್ ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296