ಹನೂರು: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಶಾಂತಿಯುತ ಮರು ಮತದಾನ ನಡೆಯಿತು.
ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯಿತು. ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎಪ್ರಿಲ್ 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಧ್ವಂಸಗೊಳಿಸಲಾಗಿತ್ತು. ಹೀಗಾಗಿ ಇಂದು ಮರುಮತದಾನ ನಡೆಯಿತು.
ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಮರು ಮತದಾನ ಉತ್ತಮವಾಗಿ ಮತ್ತು ಶಾಂತಿಯುತವಾಗಿ ನಡೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಪಿಟಿಐಗೆ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296