ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 7ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಅದಾಲತ್ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.
ನವೆಂಬರ್ 7ರಂದು ಜಿಲ್ಲೆಯ ಶಿರಾ ತಾಲೂಕಿನ ನಾದೂರು; ತಿಪಟೂರು ತಾಲೂಕಿನ ಹಾಲ್ಕುರಿಕೆ; ಮಧುಗಿರಿ ತಾಲೂಕಿನ ಚಿನಕವಜ್ರ; ತುಮಕೂರು ತಾಲೂಕಿನ ಅರೇಗುಜ್ಜನಹಳ್ಳಿ ಹಾಗೂ ಮೈದಾಳ; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೋರಗೆರೆ ಹಾಗೂ ಗೋಡೆಕೆರೆ; ಕುಣಿಗಲ್ ತಾಲೂಕಿನ ಬಾಗೇನಹಳ್ಳಿ; ಕೊರಟಗೆರೆ ತಾಲೂಕಿನ ಎಲೆರಾಂಪುರ; ಗುಬ್ಬಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q