ಜಮ್ಮು: ಶಾಂತಿ, ಸುವ್ಯವಸ್ಥೆ ಮತ್ತು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕೆ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಗಳಿಂದ ಮುಕ್ತ ಸರ್ಕಾರಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಕಾಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಮ್ಮುವಿನ ಎಂಎಎಂ ಕ್ರೀಡಾಂಗಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಧಾನಸಭಾ ಚುನಾವಣೆಯು ಮುಂದಿನ ಸರ್ಕಾರವನ್ನು ನಿರ್ಧರಿಸುವ ಐತಿಹಾಸಿಕ ಅವಕಾಶವನ್ನು ಜಮ್ಮುವಿನ ಜನತೆಗೆ ನೀಡಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಿಜೆಪಿಯನ್ನು ಆಯ್ಕೆ ಮಾಡಬೇಕು ಎಂದು ಮೋದಿ ಹೇಳಿದರು.
ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಭಾರಿ ಮತದಾನವಾಗಿದೆ. ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ರಚಿಸುವುದು ಖಚಿತ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296