ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಯಾರು ಉರುಳಿಸಲು ಸಾಧ್ಯವಿಲ್ಲ, ಬದಲಾಗಿ ಜನರೇ ಅದನ್ನು ಭವಿಷ್ಯದಲ್ಲಿ ಉರುಳಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಇಂದು ತುರುವೇಕೆರೆ ಪಟ್ಟಣದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎನ್ ಡಿ ಎ ಮೈತ್ರಿ ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜಾತಿ ಗಣತಿ ಸಮೀಕ್ಷೆ ಮಾಡುವ ಹಕ್ಕು ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದು. ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ. ಜಾತಿಗಣತಿ ಯಾವ ರೀತಿ ನಡೆದಿದೆ ಎಂಬ ಬಗ್ಗೆ ಯಾರಿಗೂ ಕೂಡ ವಿಶ್ವಾಸವಿಲ್ಲ ಎಂದು ಹೇಳಿದರು.
ಆರು ವರ್ಷದಿಂದ ಪೂರ್ಣಗೊಳಿಸಲು ಆಗದಂತಹ ಜಾತಿಗಣತಿ ಸಮೀಕ್ಷೆ ಕೇವಲ ಮೂರು ತಿಂಗಳಲ್ಲಿ ಹೇಗೆ ಸಾಧ್ಯ ಆಯ್ತು ಎಂಬುದು ಪ್ರಶ್ನಾರ್ಥ ಎಂದರು
ಇದೇ ಸಂದರ್ಭದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ಮಸಾಲೆ ಜಯರಾಮ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ದೊಡ್ಡೇಗೌಡರು, ಬಿಜೆಪಿ ಮುಖಂಡರಾದ ಲಕ್ಷ್ಮೀನಾರಾಯಣ್ ಅವರು, ಚಂದ್ರೇಶ್, ನರಸಿಂಹಮೂರ್ತಿ ಅವರು, ವಿಜಯ್ ಕುಮಾರ್ ಅವರು, ಕೊಂಡಜ್ಜಿ ವಿಶ್ವಣ್ಣ ಅವರು ಸೇರಿದಂತೆ ಜೆಡಿಎಸ್ ಬಿಜೆಪಿ ಮೈತ್ರಿ ಕೂಟದ ಪ್ರಮುಖ ಮುಖಂಡರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW