nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ

    January 21, 2026

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    • ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?
    • ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರಲ್ಲಿ ಹೃದಯ ಶ್ರೀಮಂತಿಕೆಯಿದೆ: ಜಪಾನಂದಜೀ
    ತುಮಕೂರು February 20, 2025

    ವಿಕಲಚೇತನರಲ್ಲಿ ಹೃದಯ ಶ್ರೀಮಂತಿಕೆಯಿದೆ: ಜಪಾನಂದಜೀ

    By adminFebruary 20, 2025No Comments2 Mins Read
    tumakuru vv

    ತುಮಕೂರು: ವಿಕಲಚೇತನರಿಗೆ ಅಂಗ ವೈಕಲ್ಯ ಇರಬಹುದು. ಆದರೆ ಅವರಲ್ಲಿ ಹೃದಯವಂತಿಕೆಯಿದೆ. ನಾಗರಿಕರಾದ ನಾವು ಒಮ್ಮೆ ಹೃದಯ ಕೆದಕಿ ನೋಡಿಕೊಳ್ಳಬೇಕು. ಅಲ್ಲಿ ಶ್ರೀಮಂತಿಕೆಯೇ ಇಲ್ಲ. ಎಲ್ಲರೂ ಹೃದಯ ಶೂನ್ಯರಾಗಿದ್ದಾರೆ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದಜೀ ಮಹಾರಾಜ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಲಿಟಿ ಇಂಡಿಯಾ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ‘ಹಿರಿಯ ನಾಗರಿಕರಿಗೆ ನೆರವು ಮತ್ತು ಸಾಮಾಜಿಕ ಆರೈಕೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಹೆತ್ತ ತಂದೆ–ತಾಯಿಯನ್ನು ಬೀದಿಪಾಲುಮಾಡುವ ಕೆಳಮಟ್ಟಕ್ಕೆ ಇಳಿದಿದ್ದೇವೆ. ಹಾಗಾದರೆ ಶಾಲೆ, ಕಾಲೇಜುಗಳಲ್ಲಿ ನಮಗೆ ನೀಡುವ ಶಿಕ್ಷಣ ಎಂಥದ್ದು ಪ್ರಶ್ನೆ ಹುಟ್ಟುತ್ತದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಣಕ್ಕಿಂತ ಹೆಚ್ಚಾಗಿ ಸಂಸ್ಕಾರ ಕಲಿಸಬೇಕು ಎಂದರು.


    Provided by
    Provided by

    ಪಾವಗಡ ಆಶ್ರಮದ ವತಿಯಿಂದ 19,000 ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಎಲ್ಲವನ್ನು ಸರ್ಕಾರದ ಮೇಲೆ ಹಾಕಬೇಡಿ; ನಮ್ಮ ಕರ್ತವ್ಯವೂ ಇದೆ ಎನ್ನುವುದನ್ನು ಮರೆಯಬೇಡಿ ಎಂದರು.

    ವಯಸ್ಸಾದವರನ್ನು ಮೂಲೆಗೆ ಕೂರಿಸಿ ಅವರಲ್ಲಿ ನಕಾರಾತ್ಮಕತೆಯನ್ನು ತುಂಬುತ್ತಿದ್ದೇವೆ. ವೃದ್ಧಾಪ್ಯದಲ್ಲಿರುವವರಿಗೆ, ವಿಕಲಚೇತನರಿಗೆ ಹಣದ ಅವಶ್ಯಕತೆಯಿಲ್ಲ. ಬದಲಾಗಿ ನಿಮ್ಮ ಪ್ರೀತಿ, ಕಾಳಜಿಯ ಅವಶ್ಯಕತೆಯಿದೆ.

    ಎಲ್ಲಿಯವರೆಗೂ ವಿಕಲಚೇತನರನ್ನು ಹಾಗೂ ವೃದ್ಧರನ್ನು ನಮ್ಮವರೆಂದು ತಿಳಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ ಮಹಾನ್ ಆಗುವುದಿಲ್ಲ ಎಂದರು.
    ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಿನ ಯುವಕ ಯುವತಿಯರು ಮಾಲ್ ಕಲ್ಚರ್ ಗಳನ್ನು ಅನುಸರಿಸುತ್ತಿರುವುದರಿಂದ ಅವರಿಗೆ ವೃದ್ಧರ, ವಿಕಲಚೇತನರ ಕಷ್ಟ ಕಾರ್ಪಣ್ಯಗಳು ಕಾಣುತ್ತಿಲ್ಲ. ಸಂಸ್ಕಾರವಿಲ್ಲದ ವಿದ್ಯೆ ಎಂದಿಗೂ ಶೂನ್ಯ ಎಂದರು.

    ವಿಕಲಚೇತನರಿಗೆ ಹಾಗೂ ವೃದ್ಧರಿಗೆ ಸರ್ಕಾರ ನೀಡುತ್ತಿರುವ ಯೋಜನೆಗಳು ಸಂಪೂರ್ಣವಾಗಿ ತಲುಪುತ್ತಿಲ್ಲ. ಅನೇಕ ಸೌಲಭ್ಯಗಳು ದುರುಪಯೋಗವಾಗುತ್ತಿವೆ. ಕರ್ನಾಟಕದಲ್ಲಿ ಇಂಥವರಿಗಾಗಿ ಅತಿಹೆಚ್ಚು ಯೋಜನೆಗಳಿವೆ. ಇವುಗಳ ಜಾರಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ಕೂಡ ಹೆಚ್ಚಿನ ಪ್ರಯತ್ನ ಮಾಡಲಿದೆ ಎಂದರು.

    ಮೊಬಿಲಿಟಿ ಇಂಡಿಯಾ ಕಾರ್ಯಕಾರಿ ನಿರ್ದೇಶಕಿ ಅಲ್ಬಿನಾ ಶಂಕರ್ ಮಾತನಾಡಿ, ವಿಕಲಚೇತನರು ಮತ್ತು ವೃದ್ಧರಿಗೆ ಸ್ಟಿಕ್, ಕನ್ನಡಕ, ಕುರ್ಚಿಗಳಂತ ಸಾಮಾನ್ಯ ನೆರವು ನೀಡಿದರೆ ಸಾಕು, ಅವರು ಯಾರಿಗೂ ಕೈ ಚಾಚದೆ ಬದುಕುತ್ತಾರೆ. ಅವರು ಪ್ರೀತಿ ಕಾಳಜಿ ಹೊರತು ಇನ್ನೇನೆನ್ನೂ ಅಪೇಕ್ಷಿಸುವುದಿಲ್ಲ. ಇಂದು ಅವರಿಗಾಗುವ ಸಮಸ್ಯೆಗಳು ಮುಂದೆ ನಮಗೂ ಕಾಡುತ್ತವೆ ಎನ್ನುವುದನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

    ತುಮಕೂರು ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಂಟಿ ನಿರ್ದೇಶಕ ನಟರಾಜ್ ಎಸ್., ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ರಮೇಶ್ ಬಿ., ಹಿರಿಯ ಪ್ರಾಧ್ಯಾಪಕ ಪ್ರೊ. ಕೆ. ಜಿ. ಪರಶುರಾಮ, ವರದಕ್ಷಿಣೆ ವಿರೋಧಿ ವೇದಿಕೆಯ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ದೊಡ್ಡಮನಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ

    January 21, 2026

    ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮತ್ತು ತರಬೇತುದಾರರಾಗಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of…

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.