nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ

    August 26, 2026

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026
    Facebook Twitter Instagram
    ಟ್ರೆಂಡಿಂಗ್
    • ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ
    • ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರಲ್ಲಿ ಹೃದಯ ಶ್ರೀಮಂತಿಕೆಯಿದೆ: ಜಪಾನಂದಜೀ
    ತುಮಕೂರು February 20, 2025

    ವಿಕಲಚೇತನರಲ್ಲಿ ಹೃದಯ ಶ್ರೀಮಂತಿಕೆಯಿದೆ: ಜಪಾನಂದಜೀ

    By adminFebruary 20, 2025No Comments2 Mins Read
    tumakuru vv

    ತುಮಕೂರು: ವಿಕಲಚೇತನರಿಗೆ ಅಂಗ ವೈಕಲ್ಯ ಇರಬಹುದು. ಆದರೆ ಅವರಲ್ಲಿ ಹೃದಯವಂತಿಕೆಯಿದೆ. ನಾಗರಿಕರಾದ ನಾವು ಒಮ್ಮೆ ಹೃದಯ ಕೆದಕಿ ನೋಡಿಕೊಳ್ಳಬೇಕು. ಅಲ್ಲಿ ಶ್ರೀಮಂತಿಕೆಯೇ ಇಲ್ಲ. ಎಲ್ಲರೂ ಹೃದಯ ಶೂನ್ಯರಾಗಿದ್ದಾರೆ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದಜೀ ಮಹಾರಾಜ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಲಿಟಿ ಇಂಡಿಯಾ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ‘ಹಿರಿಯ ನಾಗರಿಕರಿಗೆ ನೆರವು ಮತ್ತು ಸಾಮಾಜಿಕ ಆರೈಕೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಹೆತ್ತ ತಂದೆ–ತಾಯಿಯನ್ನು ಬೀದಿಪಾಲುಮಾಡುವ ಕೆಳಮಟ್ಟಕ್ಕೆ ಇಳಿದಿದ್ದೇವೆ. ಹಾಗಾದರೆ ಶಾಲೆ, ಕಾಲೇಜುಗಳಲ್ಲಿ ನಮಗೆ ನೀಡುವ ಶಿಕ್ಷಣ ಎಂಥದ್ದು ಪ್ರಶ್ನೆ ಹುಟ್ಟುತ್ತದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಣಕ್ಕಿಂತ ಹೆಚ್ಚಾಗಿ ಸಂಸ್ಕಾರ ಕಲಿಸಬೇಕು ಎಂದರು.

    ಪಾವಗಡ ಆಶ್ರಮದ ವತಿಯಿಂದ 19,000 ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಎಲ್ಲವನ್ನು ಸರ್ಕಾರದ ಮೇಲೆ ಹಾಕಬೇಡಿ; ನಮ್ಮ ಕರ್ತವ್ಯವೂ ಇದೆ ಎನ್ನುವುದನ್ನು ಮರೆಯಬೇಡಿ ಎಂದರು.

    ವಯಸ್ಸಾದವರನ್ನು ಮೂಲೆಗೆ ಕೂರಿಸಿ ಅವರಲ್ಲಿ ನಕಾರಾತ್ಮಕತೆಯನ್ನು ತುಂಬುತ್ತಿದ್ದೇವೆ. ವೃದ್ಧಾಪ್ಯದಲ್ಲಿರುವವರಿಗೆ, ವಿಕಲಚೇತನರಿಗೆ ಹಣದ ಅವಶ್ಯಕತೆಯಿಲ್ಲ. ಬದಲಾಗಿ ನಿಮ್ಮ ಪ್ರೀತಿ, ಕಾಳಜಿಯ ಅವಶ್ಯಕತೆಯಿದೆ.

    ಎಲ್ಲಿಯವರೆಗೂ ವಿಕಲಚೇತನರನ್ನು ಹಾಗೂ ವೃದ್ಧರನ್ನು ನಮ್ಮವರೆಂದು ತಿಳಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ ಮಹಾನ್ ಆಗುವುದಿಲ್ಲ ಎಂದರು.
    ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಿನ ಯುವಕ ಯುವತಿಯರು ಮಾಲ್ ಕಲ್ಚರ್ ಗಳನ್ನು ಅನುಸರಿಸುತ್ತಿರುವುದರಿಂದ ಅವರಿಗೆ ವೃದ್ಧರ, ವಿಕಲಚೇತನರ ಕಷ್ಟ ಕಾರ್ಪಣ್ಯಗಳು ಕಾಣುತ್ತಿಲ್ಲ. ಸಂಸ್ಕಾರವಿಲ್ಲದ ವಿದ್ಯೆ ಎಂದಿಗೂ ಶೂನ್ಯ ಎಂದರು.

    ವಿಕಲಚೇತನರಿಗೆ ಹಾಗೂ ವೃದ್ಧರಿಗೆ ಸರ್ಕಾರ ನೀಡುತ್ತಿರುವ ಯೋಜನೆಗಳು ಸಂಪೂರ್ಣವಾಗಿ ತಲುಪುತ್ತಿಲ್ಲ. ಅನೇಕ ಸೌಲಭ್ಯಗಳು ದುರುಪಯೋಗವಾಗುತ್ತಿವೆ. ಕರ್ನಾಟಕದಲ್ಲಿ ಇಂಥವರಿಗಾಗಿ ಅತಿಹೆಚ್ಚು ಯೋಜನೆಗಳಿವೆ. ಇವುಗಳ ಜಾರಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ಕೂಡ ಹೆಚ್ಚಿನ ಪ್ರಯತ್ನ ಮಾಡಲಿದೆ ಎಂದರು.

    ಮೊಬಿಲಿಟಿ ಇಂಡಿಯಾ ಕಾರ್ಯಕಾರಿ ನಿರ್ದೇಶಕಿ ಅಲ್ಬಿನಾ ಶಂಕರ್ ಮಾತನಾಡಿ, ವಿಕಲಚೇತನರು ಮತ್ತು ವೃದ್ಧರಿಗೆ ಸ್ಟಿಕ್, ಕನ್ನಡಕ, ಕುರ್ಚಿಗಳಂತ ಸಾಮಾನ್ಯ ನೆರವು ನೀಡಿದರೆ ಸಾಕು, ಅವರು ಯಾರಿಗೂ ಕೈ ಚಾಚದೆ ಬದುಕುತ್ತಾರೆ. ಅವರು ಪ್ರೀತಿ ಕಾಳಜಿ ಹೊರತು ಇನ್ನೇನೆನ್ನೂ ಅಪೇಕ್ಷಿಸುವುದಿಲ್ಲ. ಇಂದು ಅವರಿಗಾಗುವ ಸಮಸ್ಯೆಗಳು ಮುಂದೆ ನಮಗೂ ಕಾಡುತ್ತವೆ ಎನ್ನುವುದನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

    ತುಮಕೂರು ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಂಟಿ ನಿರ್ದೇಶಕ ನಟರಾಜ್ ಎಸ್., ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ರಮೇಶ್ ಬಿ., ಹಿರಿಯ ಪ್ರಾಧ್ಯಾಪಕ ಪ್ರೊ. ಕೆ. ಜಿ. ಪರಶುರಾಮ, ವರದಕ್ಷಿಣೆ ವಿರೋಧಿ ವೇದಿಕೆಯ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ದೊಡ್ಡಮನಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    ಕಿಕ್ಕೇರಿ:  ಪಟ್ಟಣದಲ್ಲಿ ಮುಂಬರುವ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಆಚರಿಸುವ ಉದ್ದೇಶದಿಂದ ಕಿಕ್ಕೇರಿ ಪೊಲೀಸ್ ಠಾಣೆಯ…

    ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ

    August 26, 2026

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.