nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026
    Facebook Twitter Instagram
    ಟ್ರೆಂಡಿಂಗ್
    • ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರಲ್ಲಿ ಹೃದಯ ಶ್ರೀಮಂತಿಕೆಯಿದೆ: ಜಪಾನಂದಜೀ
    ತುಮಕೂರು February 20, 2025

    ವಿಕಲಚೇತನರಲ್ಲಿ ಹೃದಯ ಶ್ರೀಮಂತಿಕೆಯಿದೆ: ಜಪಾನಂದಜೀ

    By adminFebruary 20, 2025No Comments2 Mins Read
    tumakuru vv

    ತುಮಕೂರು: ವಿಕಲಚೇತನರಿಗೆ ಅಂಗ ವೈಕಲ್ಯ ಇರಬಹುದು. ಆದರೆ ಅವರಲ್ಲಿ ಹೃದಯವಂತಿಕೆಯಿದೆ. ನಾಗರಿಕರಾದ ನಾವು ಒಮ್ಮೆ ಹೃದಯ ಕೆದಕಿ ನೋಡಿಕೊಳ್ಳಬೇಕು. ಅಲ್ಲಿ ಶ್ರೀಮಂತಿಕೆಯೇ ಇಲ್ಲ. ಎಲ್ಲರೂ ಹೃದಯ ಶೂನ್ಯರಾಗಿದ್ದಾರೆ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದಜೀ ಮಹಾರಾಜ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಲಿಟಿ ಇಂಡಿಯಾ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ‘ಹಿರಿಯ ನಾಗರಿಕರಿಗೆ ನೆರವು ಮತ್ತು ಸಾಮಾಜಿಕ ಆರೈಕೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಹೆತ್ತ ತಂದೆ–ತಾಯಿಯನ್ನು ಬೀದಿಪಾಲುಮಾಡುವ ಕೆಳಮಟ್ಟಕ್ಕೆ ಇಳಿದಿದ್ದೇವೆ. ಹಾಗಾದರೆ ಶಾಲೆ, ಕಾಲೇಜುಗಳಲ್ಲಿ ನಮಗೆ ನೀಡುವ ಶಿಕ್ಷಣ ಎಂಥದ್ದು ಪ್ರಶ್ನೆ ಹುಟ್ಟುತ್ತದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಣಕ್ಕಿಂತ ಹೆಚ್ಚಾಗಿ ಸಂಸ್ಕಾರ ಕಲಿಸಬೇಕು ಎಂದರು.

    ಪಾವಗಡ ಆಶ್ರಮದ ವತಿಯಿಂದ 19,000 ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಎಲ್ಲವನ್ನು ಸರ್ಕಾರದ ಮೇಲೆ ಹಾಕಬೇಡಿ; ನಮ್ಮ ಕರ್ತವ್ಯವೂ ಇದೆ ಎನ್ನುವುದನ್ನು ಮರೆಯಬೇಡಿ ಎಂದರು.

    ವಯಸ್ಸಾದವರನ್ನು ಮೂಲೆಗೆ ಕೂರಿಸಿ ಅವರಲ್ಲಿ ನಕಾರಾತ್ಮಕತೆಯನ್ನು ತುಂಬುತ್ತಿದ್ದೇವೆ. ವೃದ್ಧಾಪ್ಯದಲ್ಲಿರುವವರಿಗೆ, ವಿಕಲಚೇತನರಿಗೆ ಹಣದ ಅವಶ್ಯಕತೆಯಿಲ್ಲ. ಬದಲಾಗಿ ನಿಮ್ಮ ಪ್ರೀತಿ, ಕಾಳಜಿಯ ಅವಶ್ಯಕತೆಯಿದೆ.

    ಎಲ್ಲಿಯವರೆಗೂ ವಿಕಲಚೇತನರನ್ನು ಹಾಗೂ ವೃದ್ಧರನ್ನು ನಮ್ಮವರೆಂದು ತಿಳಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ ಮಹಾನ್ ಆಗುವುದಿಲ್ಲ ಎಂದರು.
    ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಿನ ಯುವಕ ಯುವತಿಯರು ಮಾಲ್ ಕಲ್ಚರ್ ಗಳನ್ನು ಅನುಸರಿಸುತ್ತಿರುವುದರಿಂದ ಅವರಿಗೆ ವೃದ್ಧರ, ವಿಕಲಚೇತನರ ಕಷ್ಟ ಕಾರ್ಪಣ್ಯಗಳು ಕಾಣುತ್ತಿಲ್ಲ. ಸಂಸ್ಕಾರವಿಲ್ಲದ ವಿದ್ಯೆ ಎಂದಿಗೂ ಶೂನ್ಯ ಎಂದರು.

    ವಿಕಲಚೇತನರಿಗೆ ಹಾಗೂ ವೃದ್ಧರಿಗೆ ಸರ್ಕಾರ ನೀಡುತ್ತಿರುವ ಯೋಜನೆಗಳು ಸಂಪೂರ್ಣವಾಗಿ ತಲುಪುತ್ತಿಲ್ಲ. ಅನೇಕ ಸೌಲಭ್ಯಗಳು ದುರುಪಯೋಗವಾಗುತ್ತಿವೆ. ಕರ್ನಾಟಕದಲ್ಲಿ ಇಂಥವರಿಗಾಗಿ ಅತಿಹೆಚ್ಚು ಯೋಜನೆಗಳಿವೆ. ಇವುಗಳ ಜಾರಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ಕೂಡ ಹೆಚ್ಚಿನ ಪ್ರಯತ್ನ ಮಾಡಲಿದೆ ಎಂದರು.

    ಮೊಬಿಲಿಟಿ ಇಂಡಿಯಾ ಕಾರ್ಯಕಾರಿ ನಿರ್ದೇಶಕಿ ಅಲ್ಬಿನಾ ಶಂಕರ್ ಮಾತನಾಡಿ, ವಿಕಲಚೇತನರು ಮತ್ತು ವೃದ್ಧರಿಗೆ ಸ್ಟಿಕ್, ಕನ್ನಡಕ, ಕುರ್ಚಿಗಳಂತ ಸಾಮಾನ್ಯ ನೆರವು ನೀಡಿದರೆ ಸಾಕು, ಅವರು ಯಾರಿಗೂ ಕೈ ಚಾಚದೆ ಬದುಕುತ್ತಾರೆ. ಅವರು ಪ್ರೀತಿ ಕಾಳಜಿ ಹೊರತು ಇನ್ನೇನೆನ್ನೂ ಅಪೇಕ್ಷಿಸುವುದಿಲ್ಲ. ಇಂದು ಅವರಿಗಾಗುವ ಸಮಸ್ಯೆಗಳು ಮುಂದೆ ನಮಗೂ ಕಾಡುತ್ತವೆ ಎನ್ನುವುದನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

    ತುಮಕೂರು ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಂಟಿ ನಿರ್ದೇಶಕ ನಟರಾಜ್ ಎಸ್., ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ರಮೇಶ್ ಬಿ., ಹಿರಿಯ ಪ್ರಾಧ್ಯಾಪಕ ಪ್ರೊ. ಕೆ. ಜಿ. ಪರಶುರಾಮ, ವರದಕ್ಷಿಣೆ ವಿರೋಧಿ ವೇದಿಕೆಯ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ದೊಡ್ಡಮನಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಬೆಂಗಳೂರು: ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆಯ ಬಿಡದಿ ವಲಯದಲ್ಲಿ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟ 1,453 ರೈತರಿಗೆ ನಿವೇಶನಗಳನ್ನು ಹಂಚಿಕೆ…

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.