nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ
    ರಾಜ್ಯ ಸುದ್ದಿ December 13, 2024

    ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ

    By adminDecember 13, 2024No Comments2 Mins Read
    krishne byre gowda

    ಬೆಳಗಾವಿ ಸುವರ್ಣಸೌಧ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5,000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

    ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.
    ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.


    Provided by
    Provided by

    ರಾಜಕಾಲುವೆಗಳ ಅಭಿವೃದ್ದಿಗೆ 3 ಸಾವಿರ ಕೋಟಿ:

    ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.
    ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ.

    ವಿಶ್ವಬ್ಯಾಂಕ್ನಿAದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.
    ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್ಮೆಂಟ್ ವಾಟರ್ ಲೈನ್ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.
    ಇನ್ನುಳಿದ 2,000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ.

    ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.