nammatumakuru

    Subscribe to Updates

    Get the latest creative news from FooBar about art, design and business.

    What's Hot

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026
    Facebook Twitter Instagram
    ಟ್ರೆಂಡಿಂಗ್
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ
    ರಾಜ್ಯ ಸುದ್ದಿ December 13, 2024

    ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ

    By adminDecember 13, 2024No Comments2 Mins Read
    krishne byre gowda

    ಬೆಳಗಾವಿ ಸುವರ್ಣಸೌಧ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5,000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

    ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.
    ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.

    ರಾಜಕಾಲುವೆಗಳ ಅಭಿವೃದ್ದಿಗೆ 3 ಸಾವಿರ ಕೋಟಿ:

    ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.
    ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ.

    ವಿಶ್ವಬ್ಯಾಂಕ್ನಿAದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.
    ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್ಮೆಂಟ್ ವಾಟರ್ ಲೈನ್ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.
    ಇನ್ನುಳಿದ 2,000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ.

    ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ತುಮಕೂರು: ಒಂಬೈನ್ನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ.…

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.