nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕಾರ್ಯಕರ್ತರಿಗೆ ಶಾಸಕ ಮಸಾಲ ಜಯರಾಮ್ ಮನವಿ
    ತುರುವೇಕೆರೆ February 2, 2023

    ಪ್ರಧಾನಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕಾರ್ಯಕರ್ತರಿಗೆ ಶಾಸಕ ಮಸಾಲ ಜಯರಾಮ್ ಮನವಿ

    By adminFebruary 2, 2023No Comments2 Mins Read
    masale jayaram

    ತುರುವೇಕೆರೆ:  ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ನಮ್ಮ ಜಿಲ್ಲೆಗೆ 6 ನೇ ತಾರೀಖು ನಿಟ್ಟೂರಿನ ಹೆಚ್.ಎ.ಎಲ್. ಘಟಕದ ಉದ್ಘಾಟನೆಗೆ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಕಾರ್ಯಕರ್ತರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದಲ್ಲಿ ಮೋದಿಯವರ ಮಾತುಗಳನ್ನು ಆಲಿಸಿ ಎಂದು ಶಾಸಕ ಮಸಾಲ ಜಯರಾಮ್ ಮನವಿ ಮಾಡಿದರು.

    ಶಾಸಕರ ತೋಟದಮನೆಯಲ್ಲಿ ನಡೆದ  ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,  ನಮ್ಮ ಕಾರ್ಯಕರ್ತರ ಮನೆಯ ಮೇಲೆ ಪಕ್ಷದ ಬಾವುಟವನ್ನು ಕಟ್ಟಬೇಕು. ನಮ್ಮ ತಾಲ್ಲೂಕಿನಲ್ಲಿ ಪಕ್ಷ ಸಂಘಟನೆ ಮಾಡುವ ಮನೆಮನೆ ಅಭಿಯಾನ ಕಾರ್ಯಕ್ರಮ ಬೇರೆ ತಾಲ್ಲೂಕುಗಳಿಗಿಂತ  ಸ್ವಲ್ಪ ನಿದಾನವಾಗಿ ನಡೆದಿದೆ. ಮುಖ್ಯಮಂತ್ರಿಗಳ ಜೊತೆ ಅಭಿಯಾನಕ್ಕೆ ಚಾಲನೆಯನ್ನು ತುಮಕೂರಿನಲ್ಲಿ ನೀಡಿದ್ದೇವೆ. ನಮ್ಮ ತಾಲ್ಲೂಕಿನಲ್ಲಿ ಅಭಿಯಾನದ ವೇಗವನ್ನು ಹೆಚ್ಚಿಸಬೇಕಿದೆ.  ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ನಾವು ಸಂಘಟನಾತ್ಮಕವಾಗಿ ಕೆಲಸಮಾಡಿ ಗೆಲುವು ಸಾಧಿಸಿದ್ದೇವೆ. ಸಂಘಟನೆಯ ಬಗ್ಗೆ ಒತ್ತು ಕೊಡಬೇಕಿದೆ ಎಂದು ಕರೆ ನೀಡಿದರು.


    Provided by
    Provided by

    ಪ್ರಧಾನ ಮಂತ್ರಿ ನರೇದ್ರ ಮೋದಿಯವರು ಕೊಟ್ಟಿರುವಂತಹ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವಂತಹ ಕೆಲಸವನ್ನು ಕಾರ್ಯಕರ್ತರು  ಮಾಡಬೇಕು. ತಾಲ್ಲೂಕಿನಲ್ಲಿ ಎಲ್ಲ ಹಳ್ಳಿಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೇವೆ. ಇನ್ನು ಕೆಲಸಗಳು ಬಾಕಿಯಿವೆ, 25–30 ಕೋಟಿ  ಅನುದಾನ ಬಿಡುಗಡೆ ಮಾಡಿ, ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ.  ಹೇಮಾವತಿ ನಾಲೆಗೆ ಅಮ್ಮಸಂದ್ರದ ಹತ್ತಿರ ತೂಬುನ್ನು ಮಾಡಿಸಿದ್ದೇವೆ ಇದು ಆ ಭಾಗದ ರೈತರ ಕಷ್ಟವನ್ನು ನಿವಾರಿಸಿದ್ದೇವೆ ಇದರ ಕೀರ್ತಿ ಸಚಿವ ಮಾಧುಸ್ವಾಮಿಯವರಿಗೆ ಸಲ್ಲಬೇಕು ಎಂದರು.

    ಇದೇ ವೇಳೆ  ಸಿದ್ದನಹಟ್ಟಿ, ಗೋಣೀತುಮಕೂರು, ಹೊಣಕೆರೆ, ಸೊರವನಹಳ್ಳಿ  ಮುಂತಾದ ಊರುಗಳಿಂದ ನೂರಾರು ಕಾರ್ಯಕರ್ತರು ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ  ಜೆ.ಡಿ.ಎಸ್. ಮತ್ತು ಕಾಂಗ್ರೆಸ್  ತೊರೆದು ಪಕ್ಷ ಸೇರ್ಪಡೆಯಾದರು.

    ಈ ಸಂದರ್ಭದಲ್ಲಿ  ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಕುಮಾರ್, ಪ್ರಾಂತೀಯ ಉಸ್ತುವಾರಿ  ಜೇಷ್ಟ ಪಡಿವಾಳ್,  ಹಿರಿಯ ಮುಖಂಡ ಹುಲಿನಾಯ್ಕರ್, ಗಂಗರಾಜು, ಅಧ್ಯಕ್ಷ  ಮುತ್ತಣ್ಣ, ಕೆಂಪೇಗೌಡ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಯಶಸ್, ತಾಲ್ಲೂಕು ಯುವಮೋರ್ಚಾಧ್ಯಕ್ಷ  ಹಟ್ಟಿಹಳ್ಳಿ ಗೌರೀಶ್. ಪ್ರಕಾಶ್, ರಾಮೇಗೌಡ ಮುಖಂಡರಾದ  ವಿ.ಬಿ.ಸುರೇಶ  ಕಾಳಂಜೀಹಳ್ಳಿ ಸೋಮಶೇಖರ್   ಭರತ್, ಲಿಂಗರಾಜೇಗೌಡ ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.