ದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರು ದೇಶಾದ್ಯಂತ ಪದೇ ಪದೇ ಪ್ರವಾಸ ಮಾಡುತ್ತಿದ್ದರೂ ಮಣಿಪುರಕ್ಕೆ ಏಕೆ ಭೇಟಿ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಒಳನೋಟಗಳನ್ನು ಹಂಚಿಕೊಂಡಿದ್ದಾರೆ.
“ಮಣಿಪುರದಲ್ಲಿ ಒಂದು ದುರದೃಷ್ಟಕರ ಘಟನೆ ಸಂಭವಿಸಿದೆ ಆದರೆ ಪ್ರಧಾನಿ ಮೋದಿ ಅವರು ಬೀಚ್ ಗೆ ಹೋದರು. ನೀರಿನಲ್ಲಿ ಈಜುವ ಫೋಟೋ ಸೆಷನ್ ಮಾಡಿದರು. ದೇವಾಲಯದ ನಿರ್ಮಾಣ ಸ್ಥಳದಲ್ಲಿ ಫೋಟೋ ತೆಗೆಸಿಕೊಂಡರು. ಕೇರಳ ಮತ್ತು ಮುಂಬೈಗೆ ಹೋಗಿದ್ದರು. ಅವರು ಎಲ್ಲಾ ಕಡೆ ಹೋಗುತ್ತಾರೆ. ಅವರ ಫೋಟೊಗಳನ್ನು ನೀವು ಎಲ್ಲೆಲ್ಲೂ ನೋಡಬಹುದು. ನಂತರ ದೇವರ ‘ದರ್ಶನ’ದಂತೆಯೇ. ಆದರೆ ಈ ಮಹಾನ್ ವ್ಯಕ್ತಿ ಮಣಿಪುರಕ್ಕೆ ಯಾಕೆ ಹೋಗಲಿಲ್ಲ? ಎಂದು ಖರ್ಗೆ ಕೇಳಿದ್ದಾರೆ.


