ಸಾಧು ಸಂತರಂತೆ ಕಾವಿ ಧರಿಸಿ ಮನೆಯೊಂದಕ್ಕೆ ಬಂದು, ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ. ನಾಲ್ವರು ಕಾವಿಧಾರಿಗಳು ಮಹಿಳೆಯ ಮನೆಗೆ ಬಂದಿದ್ದಾರೆ. ಬಳಿಕ ಪೂಜೆ ಮಾಡುವುದಾಗಿ ನಂಬಿಸಿ ಮಹಿಳೆಯ ಎಚ್ಚರ ತಪ್ಪಿಸಿ, ಮಹಿಳೆ ಧರಿಸಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಮಹಿಳೆಗೆ ಎಚ್ಚರವಾದ ಮೇಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ವೇಳೆ ಮಹಿಳೆ ನೆರೆಹೊರೆಯವರಿಗೆ ನಡೆದ ಘಟನೆ ತಿಳಿಸಿದ್ದಾರೆ. ಕಳ್ಳರನ್ನು ಹುಡುಕಿ ಹೋದ ಜನ, ರಸ್ತೆಯಲ್ಲಿ ಹೋಗುತ್ತಿದ್ದ ಅಮಾಯಕ ಬುಡುಬುಡುಕೆ ಕಾವಿಧಾರಿ ಒಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಬಳಿಕ ಆತ ತಪ್ಪಿತಸ್ಥನಲ್ಲ ಎಂಬುದು ತಿಳಿದು ಬಂದಿದೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296