nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 32 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳನನ್ನು ಸಾಹಸಮಯವಾಗಿ ಹಿಡಿದ ಪೊಲೀಸ್ ಪೇದೆ! | ವಿಡಿಯೋ ನೋಡಿ
    ತುಮಕೂರು August 8, 2024

    32 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳನನ್ನು ಸಾಹಸಮಯವಾಗಿ ಹಿಡಿದ ಪೊಲೀಸ್ ಪೇದೆ! | ವಿಡಿಯೋ ನೋಡಿ

    By adminAugust 8, 2024No Comments2 Mins Read

    ತುಮಕೂರು:  ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಸೇರಿದಂತೆ 32  ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮಂಜೇಶ ಎಂಬಾತನನ್ನು  ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಆತನನ್ನು ಬಂಧಿಸುವ ಸಂದರ್ಭದಲ್ಲಿ ಸಾಹಸಮಯವಾಗಿ ಪೊಲೀಸ್ ಪೇದೆ ದೊಡ್ಡಲಿಂಗಯ್ಯ ತೆಗೆದುಕೊಂಡ ಕ್ರಮದ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

    ಕೊರಟಗೆರೆ ಠಾಣಾ ವ್ಯಾಪ್ತಿಯಲ್ಲಿನ ಕೊರಟಗೆರೆ ಟೌನ್ ಡಿಸಿಸಿ ಬ್ಯಾಂಕ್‌ ಹತ್ತಿರ ಮನೆಯೊಂದರಲ್ಲಿ ಆರೋಪಿ ಮಂಜೇಶ ಕಳ್ಳತನ ಮಾಡಿದ್ದನು.  ಆರೋಪಿ ಪತ್ತೆಯ ಬಗ್ಗೆ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಲಾಗಿತ್ತು ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಕಮ್ಯಾಂಡ್ ಸೆಂಟರ್‌ ನಲ್ಲಿ ವಾಹನಗಳನ್ನು ಪರಿಶೀಲನೆ ಮಾಡಿದಾಗ ಆರೋಪಿಯು ತುಮಕೂರು ನಗರದಲ್ಲಿ ಸಂಚರಿಸಿ ನಂತರ ದಾಬಸ್‌ ಪೇಟೆ, ನೆಲಮಂಗಲ ಮೂಲಕ ಬೆಂಗಳೂರು ತಲುಪಿದ್ದು ಆರೋಪಿ ಪತ್ತೆಗಾಗಿ ಅರೋಪಿತನ ವಾಹನ ನಂಬರ್‌ ನ್ನು ಬೆಂಗಳೂರು ನಗರದ ಟಿ.ಎಂ.ಸಿ. ಯ ಅಲರ್ಟ್ ವಾರ್ನಿಂಗ್ ಸೆಂಟರ್‌ ಗೆ ತಿಳಿಸಲಾಗಿತ್ತು.


    Provided by
    Provided by

    ಆಗಸ್ಟ್ 6ರಂದು  ಟಿ.ಎಂ.ಸಿ.ಯ ಇಂಜಿನಿಯರ್ ಅಶೋಕ್ ರವರು, ಕೊರಟಗೆರೆ ಪೊಲೀಸ್ ಠಾಣಾ ದೊಡ್ಡಲಿಂಗಯ್ಯ ರವರಿಗೆ ಸದಾಶಿವನಗರ ಟ್ರಾಫಿಕ್ ಜಂಕ್ಷನ್ ಬಳಿ ಆರೋಪಿ ಮಂಜೇಶ ದ್ವಿಚಕ್ರ ವಾಹನದಲ್ಲಿ ಬರುತ್ತಿರುವ ಬಗ್ಗೆ ನೀಡಿದ ಮಾಹಿತಿಯ ಮೇರೆಗೆ ಮಂಜೇಶ ನನ್ನ ದ್ವಿ ಚಕ್ರ ವಾಹನ ಸಮೇತ ಅಡ್ಡಗಟ್ಟಿದ್ದರು.

    ಆದರೆ ಆರೋಪಿ ಮಂಜೇಶ ವಾಹನವನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದನು.  ಈ ವೇಳೆ ಆತನ ಕಾಲನ್ನು ಹಿಡಿದು ಜಗ್ಗಿದ್ದು, ಸುಮಾರು 20 ಮೀಟರ್ ದೂರ ಎಳೆದು ಕೊಂಡು ಹೋಗಿರುತ್ತಾನೆ. ನಂತರ ಅಲ್ಲೆ ಇದ್ದ ಸದಾಶಿವನಗರ ಟ್ರಾಫಿಕ್‌ ಠಾಣಾ ಮಹಿಳಾ ಎಎಸ್‌ ಐ ನಾಗಮ್ಮ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಶ್ರೀಧರ್ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ.

    ಆರೋಪಿಯಿಂದ ಒಟ್ಟು 10,000/- ರೂ ನಗದು ಹಣ, ಹಾಗೂ 6,75,000/- ರೂ ಬೆಲೆ ಬಾಳುವ 135 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ ಒಬ್ಬನೆ ದ್ವಿಚಕ್ರ ವಾಹನದಲ್ಲಿ ಬಂದು ವಯಸ್ಸಾದ ಹೆಂಗಸರಿಗೆ ಪೋಸ್ಟ್ ಆಫೀಸ್ ಮತ್ತು ಬ್ಯಾಂಕ್ ಗಳ ಹತ್ತಿರ ವೃದ್ಧಾಪ್ಯ ವೇತನ ಮತ್ತು ಪೆನ್ಶನ್ ಕೊಡಿಸುವುದಾಗಿ ನಂಬಿಸಿ ಅವರ ಆಧಾರ್ ಕಾರ್ಡ, ರೇಷನ್ ಕಾರ್ಡ್ ಇತ್ಯಾದಿ ದಾಖಲಾತಿಗಳನ್ನು ಕೇಳಿ ಅವನ್ನು ಜೆರಾಕ್ಸ್ ಮಾಡಿಕೊಂಡು ಬರಲು ಆಸಾಮಿಯ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್‌ ಗಳಲ್ಲಿ ಮೈಮೇಲಿನ ಒಡವೆಗಳನ್ನು ನೋಡಿದರೆ ವೃದ್ಧಾಪ್ಯ ವೇತನ ಮತ್ತು ಪೆನ್ಶನ್  ಕೊಡುವುದಿಲ್ಲ ಎಂದು ಅವರ ಮೈ ಮೇಲೆ ಇದ್ದ ಆಭರಣಗಳನ್ನು ಬಿಚ್ಚಿಸಿಕೊಂಡು ಅಥವ ಬಲವಂತವಾಗಿ ಕಿತ್ತುಕೊಂಡು ಹೋಗುವ ಪ್ರವೃತ್ತಿ ಉಳ್ಳವನಾಗಿದ್ದಾನೆ.

    ಈ ಆಭರಣಗಳನ್ನು ಮಾರಾಟ ಮಾಡಿ ಬಂದ ಹಣದಿಂದ ಗೋವಾ/ಮಂಗಳೂರು ಕಡೆಗಳಿಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದನು.

     

    ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಮಂಜೇಶ್ ನ ಮೇಲೆ ಪ್ರಕರಣ ದಾಖಲಾಗಿದೆ:

    1)  ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೊನಂ:56/2024 ಕಲಂ:420 ಐಪಿಸಿ

    2)  ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೊನಂ:75/2024 ಕಲಂ:420 ಐಪಿಸಿ

    3)  ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೊನಂ:135/2024 ಕಲಂ:379 ಐಪಿಸಿ

    4)  ಕೊರಟಗೆರೆ ಪೊಲೀಸ್ ಠಾಣೆ ಮೊನಂ:182/2024 ಕಲಂ:420 ಐಪಿಸಿ

    5)  ಹೆಬ್ಬರು ಠಾಣೆಯಲ್ಲಿ 229/2023 ಕಲಂ:420 ಐಪಿಸಿ

    6)  ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮೊನಂ:21/2024 ಕಲಂ:420 ಐಪಿಸಿ

    7)  ಕೋಳಾಲ ಪೊಲೀಸ್ ಠಾಣೆಯಲ್ಲಿ ಮೊನಂ:25/2024 ಕಲಂ:379 ಐಪಿಸಿ

    ಇವುಗಳಲ್ಲದೆ ಆರೋಪಿಯು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಸಿಟಿ ಪೊಲೀಸ್ ಠಾಣೆಗಳ ವ್ಯಾಪ್ತಿಗಳ ಸುಮಾರು 32 ಪ್ರಕರಣಗಳಲ್ಲಿ ಆರೋಪಿಯಾಗಿರುತ್ತಾನೆ.

    32 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳನನ್ನು ಸಾಹಸಮಯವಾಗಿ ಹಿಡಿದ ಪೊಲೀಸ್ ಪೇದೆ! pic.twitter.com/tiLjVgZgiN

    — Namma Tumakuru (@namma_tumakuru) August 8, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.