nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಡನ ಬಿಟ್ಟು ಮಾಜಿ ಲವರ್ ಹಿಂದೆ ಬಿದ್ದವಳು ಪೊಲೀಸರ ಅತಿಥಿ!
    ತುಮಕೂರು August 2, 2024

    ಗಂಡನ ಬಿಟ್ಟು ಮಾಜಿ ಲವರ್ ಹಿಂದೆ ಬಿದ್ದವಳು ಪೊಲೀಸರ ಅತಿಥಿ!

    By adminAugust 2, 2024No Comments3 Mins Read
    thumakur

    ತನಿಖಾ ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನು ಬಿಟ್ಟು ಮಾಜಿ ಪ್ರಿಯಕರನ ಹಿಂದೆ ಬಿದ್ದವಳು ತನ್ನ ಪತಿಯನ್ನೇ ಹತ್ಯೆ ಮಾಡಿಸಿರುವ ಘಟನೆ ಕೊರಟಗೆರೆಯ ಮಲ್ಲೇಕಾವು ಗ್ರಾಮದಲ್ಲಿ ನಡೆದಿದೆ.


    Provided by
    Provided by

    ಪ್ರಕಾಶ್ (32) ಮೃತ ದುರ್ದೈವಿಯಾಗಿದ್ದಾನೆ. ಪ್ರಿಯಕರ ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಪೊಲೀಸ್ ತನಿಖೆಯಿಂದ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೂರು ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಕೊರಟಗೆರೆ ಪೊಲೀಸರು ತನಿಖೆ ವೇಳೆ ಬರೋಬ್ಬರಿ ಆರು ಜನ ಸೇರಿ ಪ್ರಕಾಶ್‍ನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ತಾಲ್ಲೂಕಿನ ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8 ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು. ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರು ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ ಆರು ಜನ ಆರೋಪಿಗಳ ಕೈವಾಡ ಇರುವುದು ತಿಳಿದು ಬಂದಿದ್ದು, ಆರು ಜನರನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಅಂಚೆ ಕಚೇರಿಯ ಸಿಬ್ಬಂದಿ ಮೃತ ಪ್ರಕಾಶನ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು7 (36), ಮಲ್ಲೇಕಾವಿನ ಹರ್ಷಿತಾ (28), ಸೋಮಶೇಖರ್ (27), ಮಹೇಶ್ (32), ಕಂಬದಹಳ್ಳಿಯ ದರ್ಶನ್ (24), ಬಾಗೂರು ರಂಗಸ್ವಾಮಿ ಎಂಬ ಆರು ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿರುವುದು ತಿಳಿದು ಬಂದಿದೆ.

    ಮಾಜಿ ಲವರ್ ಪ್ರೀತಿಗಾಗಿ ಮನೆ ಬಿಟ್ಟಿದ್ದ ಹರ್ಷಿತಾ:

    ಕಲಬುರ್ಗಿ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹರ್ಷಿತಾ ಮದುವೆಯಾಗಿ ಮೂರು ವರ್ಷವಾಗಿತ್ತು. ಇವರಿಬ್ಬರಿಗು ಎರಡು ವರ್ಷದ ಗಂಡು ಮಗು ಜನಿಸಿದೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂದರಾಜು ಅಲಿಯಾಸ್ ಗುಂಡನ ಜೊತೆ ಮನೆ ಬಿಟ್ಟು ಓಡಿ ಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿ ಸಂಧಾನ ಆಗಿತ್ತು. ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗುವ ಸನ್ನಿವೇಶ ಎದುರಾಗಿದ್ದು, ಇದರಿಂದ ಮಗು ಅನಾಥವಾಗಿದೆ.

    ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನ್ ಕುಮಾರ್,ಯೊಗೀಶ್, ಎಎಸೈ ಮಂಜುನಾಥ ಆರು ಜನ ಆರೋಪಿಗಳನ್ನು ಕೃತ್ಯ ನಡೆದ 24 ಗಂಟೆಯೊಳಗೆ ಅರೆಸ್ಟ್ ಮಾಡುವಲ್ಲಿ ಸಫಲರಾಗಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೃತ್ಯದ ಸಂಪೂರ್ಣ ಹಿನ್ನಲೆ:

    ಸಾಮಾಜಿಕ ಜಾಲತಾಣದಲ್ಲಿ ಪ್ರಕಾಶ್‍ಗೆ ಹರ್ಷಿತಾ ಪರಿಚಯವಾಗಿತ್ತು. ಬಳಿಕ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದಕ್ಕೂ ಮೊದಲು ಹರ್ಷಿತಾ ಪ್ರೀತಿಸುತ್ತಿದ್ದವನ ಸಂಪರ್ಕ ಸಾಮಾಜಿಕ ಜಾಲತಾಣದಲ್ಲಿ ದೊರಕಿದ್ದು, ಇದರಿಂದ ಹಳೆ ಪ್ರಿಯಕರನಿಗಾಗಿ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ ಎನ್ನಲಾಗಿದೆ. ತಾಲ್ಲೂಕಿನ ಮಲ್ಲೇಕಾವು ಗ್ರಾಮದ ಹರ್ಷಿತಾಳಿಗೆ 3 ವರ್ಷದ ಹಿಂದೆ ಕಲಬುರುಗಿಯ ಜಿಲ್ಲೆಯ ಚಿಂಚೋಳಿ ಗ್ರಾಮದ ಪ್ರಕಾಶ್ ಇನ್ಸ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದ ಇಬ್ಬರು ಪ್ರೀತಿಸಿ ಮದುವೆ ಅಗಿದ್ದರು. ಪತ್ನಿಯ ಜೊತೆ ಆಕೆಯ ತವರು ಮನೆಯಲ್ಲೇ ಪ್ರಕಾಶ್ ವಾಸವಿದ್ದು, ದಂಪತಿಗೆ ಒಂದು ಮಗು ಕೂಡ ಆಗಿತ್ತು.ಪ್ರಕಾಶ್ ಹೊರಗುತ್ತಿಗೆ ನೌಕರನಾಗಿ ಸ್ಥಳೀಯ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ,ಈ ಮಧ್ಯೆ ಹರ್ಷಿತಾಳಿಗೆ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಿಯತಮ ಸಂಪರ್ಕಕ್ಕೆ ಸಿಕ್ಕಿದ್ದು ಮತ್ತೇ ಪ್ರೀತಿ ಅರಳಿದೆ.

    ಪ್ರೀತಿಗೆ ಅಡ್ಡಿಯಾದ ಪತಿಯನ್ನು ಮುಗಿಸಲು ಸಹೋದರ ಸೋಮಶೇಖರ ಹಾಗೂ ಪ್ರಿಯತಮ ಗೋವಿಂದರಾಜು ಆಲಿಯಾಸ್ ಗುಂಡನಿಗೆ ಹರ್ಷಿತಾ ಸುಪಾರಿ ಕೊಟ್ಟಿದ್ದು, ಪೂರ್ವ ಯೋಜನೆಯಂತೆ ಹರ್ಷಿತಾ ಮತ್ತು ಪ್ರಕಾಶ್ ಜೊತೆಗಿರುವಾಗ ಹತ್ಯೆಗೆ ಸಂಚು ರೂಪಿಸಿ ಪ್ರಕಾಶ್ ಮೇಲೆ ಐದು ಜನರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಕಾಶ್‍ನನ್ನು ಸ್ಥಳೀಯರು ತಾಲ್ಲೂಕು ಆಸ್ಪತ್ರೆಗೆ ಸೇರಿಸಿದ್ದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

    thumakur 1

    ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ:

    ಈ ಸಂಬಂಧ ಕೊರಟಗೆರೆ ಸಿಪಿಐ ಅನಿಲ್ ಮತ್ತು ಪಿಎಸ್ಐ ಚೇತನ್ ಕುಮಾರ್,ಪಿಎಸ್ಐ ಯೋಗೀಶ್ ನೇತೃತ್ವದ ಪೊಲೀಸರ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಅನುಮಾನ ಬಂದ ಪೊಲೀಸರು ಪತ್ನಿ ಹರ್ಷಿತಾಳನ್ನು ತನಿಖೆ ಮಾಡಿದಾಗ ಕೃತ್ಯ ಎಸಗಿರುವ ಹಿನ್ನೆಲೆ ಮತ್ತು ಇನ್ನಿತರ ಸಹಚರರ ಬಗ್ಗೆ ಬಾಯಿ ಬಿಟ್ಟಿರುವುದು ಬೆಳಕಿಗೆ ಬಂದಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಇದರಿಂದ ಕೊರಟಗೆರೆ ಪೊಲೀಸರ ಕಾರ್ಯ ವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.