nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸರ ಮೇಲೆ ಪೆಟ್ರೋಲ್ ಬಾಟಲಿ ದಾಳಿ ಭಯೋತ್ಪಾದನಾ ಕೃತ್ಯ: ಹೈಕೋರ್ಟ್
    ರಾಷ್ಟ್ರೀಯ ಸುದ್ದಿ August 11, 2022

    ಪೊಲೀಸರ ಮೇಲೆ ಪೆಟ್ರೋಲ್ ಬಾಟಲಿ ದಾಳಿ ಭಯೋತ್ಪಾದನಾ ಕೃತ್ಯ: ಹೈಕೋರ್ಟ್

    By adminAugust 11, 2022No Comments2 Mins Read
    court

    ಕರ್ತವ್ಯದಲ್ಲಿರುವ ಪೊಲೀಸರು ಹಾಗೂ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ಮಾಡಿರುವುದು ‘ಭಯೋತ್ಪಾದನಾ ಕೃತ್ಯ’ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ದಾಳಿ ಪ್ರಕರಣದಲ್ಲಿ ಭಾಗಿಯಾಗಿರುವ ಅತೀಕ್ ಅಹ್ಮದ್ ಇನ್ನಿತರರು ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹಾಗೂ ಶಿವಶಂಕರ್ ಅಮರಣ್ಣವರ್ ಅವರಿದ್ದ ಹೈಕೋರ್ಟ್ ನ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

    ಉದ್ರಿಕ್ತರುಗಳು ಪೊಲೀಸ್ ಠಾಣೆಯ ಮುಂದೆ ಗುಂಪು ಗೂಡುವುದು, ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯ ಮೇಲೆ ಕಬ್ಬಿಣದ ರಾಡ್, ಪೆಟ್ರೋಲ್ ತುಂಬಿದ ಬಾಟಲ್‌ಗಳು ಸೇರಿದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸುವುದು, ಗಲಭೆ ಉಂಟು ಮಾಡುವುದು ಇವೆಲ್ಲವೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಮಾಡಿದ ಭಯೋತ್ಪಾದನಾ ಚಟುವಟಿಕೆಗಳು ಎನಿಸುತ್ತದೆ ಎಂದು ತಿಳಿಸಿದ್ದಾರೆ.


    Provided by
    Provided by

    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣ ಕುರಿತು ರಾಷ್ಟ್ರೀಯ ತನಿಖಾ ದಳ( ಎನ್‌ಐಎ) ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಆರೋಪಿಗಳು ಭಯೋತ್ಪದನಾ ಕೃತ್ಯ ಎಸಗುವ ಉದ್ದೇಶದಿಂದಲೇ ಘಟನಾ ಸ್ಥಳದಲ್ಲಿ ಸೇರಿದ್ದರು ಎಂಬುದು ಮೆಲ್ನೋಟಕ್ಕೆ ಸಾಬೀತಾಗಿರುತ್ತದೆ ಎಂದು ತೀರ್ಪಿನಲ್ಲಿ ಹೇಳಿದ್ದಾರೆ.

    ಈ ಪ್ರಕರಣದಲ್ಲಿ ಯುಎಪಿಎ ಕಾಯಿದೆ ಸೆಕ್ಷನ್ ೪೩ಡಿ (೫) ಅನ್ವಯವಾಗುತ್ತದೆ. ಆರೋಪ ಪಟ್ಟಿಯಲ್ಲಿ ಎನ್‌ಐಎ ಉಲ್ಲೇಖಿಸಿರುವ ಅಂಶಗಳು, ಅರ್ಜಿದಾರರ ವಿರುದ್ಧ ಮಾಡಿರುವ ಆರೋಪಗಳು ಮೇಲ್ನೋಟಕ್ಕೆ ನಿಜ ಎನಿಸುತ್ತಿವೆ ಎಂದು ತಿಳಿಸಿದರು.

    ಅರ್ಜಿದಾರರನ್ನು ಪರವಾಗಿ ಜಾಮೀನು ನೀಡುವಂತೆ ವಾದಿಸಿದ ವಕೀಲ ಮೊಹಮ್ಮದ್ ತಾಹೀರ್ ಅವರು ಎನ್‌ಐಎ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಕೆಲವು ಸಾಕ್ಷಿಗಳು ನೀಡಿರುವ ಹೇಳಿಕೆಗಳು ಮತ್ತು ಅದೇ ಸಾಕ್ಷಿಗಳು ಸಿಸಿಬಿ ಪೊಲೀಸರ ಮುಂದೆ ನೀಡಿದ್ದ ಹೇಳಿಕೆಗಳಿಗೆ ವ್ಯತ್ಯಾಸವಿದೆ. ಎನ್‌ಐಎ ತನಗೆ ಹೇಗೆ ಬೇಕೋ ಹಾಗೆ ಸಾಕ್ಷಿಗಳ ಹೇಳಿಕೆಗಳನ್ನು ತಿರುಚಿದೆ. ಲಭ್ಯವಿರುವ ಸಾಕ್ಷ್ಯಗಳ ಪ್ರಕಾರ ಆರೋಪಿಗಳು ದೊಂಬಿ ಅಥವಾ ಗಲಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಪ್ರತಿಪಾದಿಸಿದರು. ಇದಕ್ಕೆ ಪ್ರತಿಯಾಗಿ ಎನ್‌ಐಎ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಅವರು ಯುಎಪಿಎ ಕಾಯಿದೆ ಸೆಕ್ಷನ್ ೪೩ಡಿ (೫)ರ ಅಡಿ ಪ್ರಕರಣದ ಡೈರಿ ಮತ್ತು ಅಂತಿಮ ವರದಿಯನ್ನು ಆಧರಿಸಿ ಆರೋಪಿಗಳ ಜಾಮೀನು ಅರ್ಜಿ ಕುರಿತು ನಿರ್ಧರಿಸಬಹುದು. ಮೇಲ್ನೋಟಕ್ಕೆ ಆರೋಪಿಗಳು ಭಯೋತ್ಪಾದನಾ ಕೃತ್ಯ ಎಸಗಲು ಮುಂದಾಗಿರುವುದು ದೃಢಪಟ್ಟಿದೆ.

    ಅದು ಯುಎಪಿಎ ಕಾಯಿದೆ ಸೆಕ್ಷನ್ ೨(೧)(ಎ) ಮತ್ತು ಸೆಕ್ಷನ್ ೨(೧)(ಕೆ) ವ್ಯಾಪ್ತಿಗೆ ಒಳಪಡುತ್ತದೆ. ಜೊತೆಗೆ ಸೆಕ್ಷನ್ ೧೫ರ ಪ್ರಕಾರ ’ಭಯೋತ್ಪಾದನಾ ಕೃತ್ಯ’ ಎಸಗುವ ಉದ್ದೇಶದಿಂದಲೇ ಮಾರಕಾಸ್ತ್ರಗಳನ್ನು ಹೊಂದಿರುವುದು ಕಂಡುಬಂದಿದೆ. ಆದ್ದರಿಂದ ಆರೋಪಿಗಳಿಗೆ ಜಾಮೀನು ನೀಡಲು ತಮ್ಮ ವಿರೋಧವಿದೆಯೆಂದು ಹೇಳಿದ್ದರು. ಎರಡೂ ಕಡೆಯ ವಾದ ವಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠವು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.