nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡವರು ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್–ಮುಸೊಲಿನಿಯಂಥವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

    January 25, 2026

    45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ

    January 25, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026
    Facebook Twitter Instagram
    ಟ್ರೆಂಡಿಂಗ್
    • ಬಡವರು ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್–ಮುಸೊಲಿನಿಯಂಥವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ
    • 45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ
    • ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ
    • ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ
    • ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ
    • ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ
    • ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ
    • ಜ.27ರಂದು ಸವಿತಾ ಮಹರ್ಷಿ ಜಯಂತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ
    ತುರುವೇಕೆರೆ April 10, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    By adminApril 10, 2025No Comments2 Mins Read
    adi jambhava

    ತುರುವೇಕೆರೆ: ನಮ್ಮ ಧಾರ್ಮಿಕ ಆಚರಣೆಗಳಿಗೆ ಧಕ್ಕೆಯಾಗುತ್ತಿದ್ದು ಪ್ರತಿ ವರ್ಷದಂತೆ ನಡೆಯಬೇಕಿದ್ದ ಕೆಂಪಮ್ಮದೇವಿ ಮತ್ತು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿರುವುದು ನಮಗೆ ಬಹಳ ಬೇಸರ ತಂದಿದೆ ಎಂದು ಮರಾಠಿ ಪಾಳ್ಯದ ಮಾದಿಗ ಸಮುದಾಯದ ಮುಖಂಡರಾದ ಬೈರಯ್ಯರವರು ಅಸಮಾಧಾನ ವ್ಯಕ್ತಪಡಿಸಿದ್ರು.

    ಪಟ್ಟಣದ ಆದಿಜಾಂಭವ ಸಮಿತಿಯ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವುಗಳು ಕೂಡ ದಲಿತ ಜನಾಂಗದ ಮಾದಿಗ ಜಾತಿಗೆ ಸೇರಿದವರಾಗಿದ್ದು, ಅಸ್ಪೃಶ್ಯತೆ ನಮ್ಮ ಗ್ರಾಮದಲ್ಲಿ ಕುಣಿಕೇನಹಳ್ಳಿ ಗ್ರಾಮದಲ್ಲಿ ಇಲ್ಲ ಎಂದರು.


    Provided by
    Provided by

    ತಾಲೂಕಿನ ಕುಣಿಕೇನಹಳ್ಳಿ ಗ್ರಾಮದಲ್ಲಿ ತಿಂಗಳ 5 ರಿಂದ ನಡೆಯಬೇಕಿದ್ದ ಜಾತ್ರಾ ಮಹೋತ್ಸವ ಕುಣಿಕೇನಹಳ್ಳಿ ಗ್ರಾಮದ ಚಲವಾದಿ ಸಮುದಾಯದ ಜಗದೀಶ್ ರವರು ಸಮಿತಿಗಳಲ್ಲಿ ನಮಗೂ ಸೇರ್ಪಡೆ ಮಾಡಿಕೊಳ್ಳಿ ಎಂಬುವ ಬೇಡಿಕೆಯಿಟ್ಟ ಕಾರಣ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಜಾತ್ರಾ ಮಹೋತ್ಸವಕ್ಕಾಗಿ ತಾಲೂಕು ಕಚೇರಿಯಲ್ಲಿ ಶಾಂತಿ ನಡೆಸಿದರೂ ಅದು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎ.ಎನ್.ಅಹಮದ್ ಜಾತ್ರೆಯನ್ನು ಮುಂದೂಡುವಂತೆ ಹೇಳಿದ್ದರು.

    ಕುಣಿಕೇನಹಳ್ಳಿ ಗ್ರಾಮದಲ್ಲಿ ಕೆಂಪಮ್ಮ ದೇವಿಯ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಸಾಗುವ ದೇವರು ನಾವು ಪೂಜೆ ಮಾಡುವ ಚಿಕ್ಕಮ್ಮ ದೇವಿ ದೇವತೆಯಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ನಾವು ಮರಾಠಿ ಪಾಳ್ಯದಲ್ಲಿ ಸುಮಾರು 10 ಮನೆಗಳ ಅರ್ಚಕರಿದ್ದು, ಪ್ರತಿ ತಿಂಗಳು ಪೂಜೆ ಪುನಸ್ಕಾರಗಳನ್ನು ಮುಂದೂಡಿಕೆ ಮಾಡುತ್ತಿರುವುದರಿಂದ ನಮಗೆ ಬಹಳ ಬೇಸರವಾಗಿದೆ ಎಂದರು.

    ಈ ದೇವತೆಯ ಜಾತ್ರೆ ಮಾಡದಿದ್ದರೆ ಗ್ರಾಮಗಳಿಗೆ ಒಳಿತಾಗುವುದಿಲ್ಲ ಎಂಬ ಆತಂಕ ನಮ್ಮಲ್ಲಿ ಕಾಡುತ್ತಿದೆ. ತಲತಲಾಂತರದಿಂದ ನಡೆಸಿಕೊಂಡು ಬಂದಿರುವ ಜಾತ್ರಾ ಮಹೋತ್ಸವವನ್ನು ಯಾವುದೇ ಜಾತಿ ಭೇದವಿಲ್ಲದೆ ತಾರತಮ್ಯ ಮಾಡದೆ ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದಾರೆ. ಶಾಂತಿ, ಸಾಮರಸ್ಯದಿಂದ ಜೀವನ ಮಾಡಿಕೊಂಡು, ಜಾತ್ರಾ ಮಹೋತ್ಸವದಲ್ಲಿ ವಿಜೃಂಭಣೆಯಿಂದ ಸಡಗರದಿಂದ ಆಚರಣೆ ಮಾಡುತ್ತಿದ್ದೆವು. ಆದರೆ ಈ ವರ್ಷದ ಜಾತ್ರೆಗೆ ಭಂಗ ಉಂಟಾಗಿದೆ. ದಯಮಾಡಿ ತಾಲೂಕು ಆಡಳಿತ ಇದನ್ನು ಸರಿಪಡಿಸಿ ಜಾತ್ರಾ ಮಹೋತ್ಸವ ಮಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಚನ್ನಬಸವಯ್ಯ ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಮರಾಠಿ ಪಾಳ್ಯ, ಚನ್ನಿಗಯ್ಯ, ನಾಗರಾಜ್, ಚೆನ್ನಿಗರಾಯ, ಗೇಟಪ್ಪ, ಪುಟ್ಟರಾಜು, ಚಂದ್ರೇಶ್, ಚನ್ನಪ್ಪ, ಪ್ರದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ತುರುವೇಕೆರೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪನ ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ ಅನರ್ಹ ಪಟ್ಟ: ಪಂಚಾಕ್ಷರಿ ಆರೋಪ

    January 23, 2026

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಡವರು ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್–ಮುಸೊಲಿನಿಯಂಥವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

    January 25, 2026

    ಹುಬ್ಬಳ್ಳಿ: ಜಾತಿ, ಧರ್ಮಗಳನ್ನು ಬದಿಗಿಟ್ಟು ಬಡವರು ಮತ್ತು ಹಿಂದುಳಿದವರು ತಮ್ಮ ಹಕ್ಕುಗಳು, ಸಂವಿಧಾನ ಹಾಗೂ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಲು ಕೇಂದ್ರದ…

    45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ

    January 25, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ತಿಪಟೂರಿನಲ್ಲಿ ಸಿ.ಬಿ.ಶಶಿಧರ್ ಟೂಡಾ ಏಕವ್ಯಕ್ತಿ ಪ್ರತಿಭಟನೆ

    January 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.