nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ
    ತುರುವೇಕೆರೆ April 10, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    By adminApril 10, 2025No Comments2 Mins Read
    adi jambhava

    ತುರುವೇಕೆರೆ: ನಮ್ಮ ಧಾರ್ಮಿಕ ಆಚರಣೆಗಳಿಗೆ ಧಕ್ಕೆಯಾಗುತ್ತಿದ್ದು ಪ್ರತಿ ವರ್ಷದಂತೆ ನಡೆಯಬೇಕಿದ್ದ ಕೆಂಪಮ್ಮದೇವಿ ಮತ್ತು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿರುವುದು ನಮಗೆ ಬಹಳ ಬೇಸರ ತಂದಿದೆ ಎಂದು ಮರಾಠಿ ಪಾಳ್ಯದ ಮಾದಿಗ ಸಮುದಾಯದ ಮುಖಂಡರಾದ ಬೈರಯ್ಯರವರು ಅಸಮಾಧಾನ ವ್ಯಕ್ತಪಡಿಸಿದ್ರು.

    ಪಟ್ಟಣದ ಆದಿಜಾಂಭವ ಸಮಿತಿಯ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವುಗಳು ಕೂಡ ದಲಿತ ಜನಾಂಗದ ಮಾದಿಗ ಜಾತಿಗೆ ಸೇರಿದವರಾಗಿದ್ದು, ಅಸ್ಪೃಶ್ಯತೆ ನಮ್ಮ ಗ್ರಾಮದಲ್ಲಿ ಕುಣಿಕೇನಹಳ್ಳಿ ಗ್ರಾಮದಲ್ಲಿ ಇಲ್ಲ ಎಂದರು.


    Provided by
    Provided by

    ತಾಲೂಕಿನ ಕುಣಿಕೇನಹಳ್ಳಿ ಗ್ರಾಮದಲ್ಲಿ ತಿಂಗಳ 5 ರಿಂದ ನಡೆಯಬೇಕಿದ್ದ ಜಾತ್ರಾ ಮಹೋತ್ಸವ ಕುಣಿಕೇನಹಳ್ಳಿ ಗ್ರಾಮದ ಚಲವಾದಿ ಸಮುದಾಯದ ಜಗದೀಶ್ ರವರು ಸಮಿತಿಗಳಲ್ಲಿ ನಮಗೂ ಸೇರ್ಪಡೆ ಮಾಡಿಕೊಳ್ಳಿ ಎಂಬುವ ಬೇಡಿಕೆಯಿಟ್ಟ ಕಾರಣ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಜಾತ್ರಾ ಮಹೋತ್ಸವಕ್ಕಾಗಿ ತಾಲೂಕು ಕಚೇರಿಯಲ್ಲಿ ಶಾಂತಿ ನಡೆಸಿದರೂ ಅದು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎ.ಎನ್.ಅಹಮದ್ ಜಾತ್ರೆಯನ್ನು ಮುಂದೂಡುವಂತೆ ಹೇಳಿದ್ದರು.

    ಕುಣಿಕೇನಹಳ್ಳಿ ಗ್ರಾಮದಲ್ಲಿ ಕೆಂಪಮ್ಮ ದೇವಿಯ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಸಾಗುವ ದೇವರು ನಾವು ಪೂಜೆ ಮಾಡುವ ಚಿಕ್ಕಮ್ಮ ದೇವಿ ದೇವತೆಯಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ನಾವು ಮರಾಠಿ ಪಾಳ್ಯದಲ್ಲಿ ಸುಮಾರು 10 ಮನೆಗಳ ಅರ್ಚಕರಿದ್ದು, ಪ್ರತಿ ತಿಂಗಳು ಪೂಜೆ ಪುನಸ್ಕಾರಗಳನ್ನು ಮುಂದೂಡಿಕೆ ಮಾಡುತ್ತಿರುವುದರಿಂದ ನಮಗೆ ಬಹಳ ಬೇಸರವಾಗಿದೆ ಎಂದರು.

    ಈ ದೇವತೆಯ ಜಾತ್ರೆ ಮಾಡದಿದ್ದರೆ ಗ್ರಾಮಗಳಿಗೆ ಒಳಿತಾಗುವುದಿಲ್ಲ ಎಂಬ ಆತಂಕ ನಮ್ಮಲ್ಲಿ ಕಾಡುತ್ತಿದೆ. ತಲತಲಾಂತರದಿಂದ ನಡೆಸಿಕೊಂಡು ಬಂದಿರುವ ಜಾತ್ರಾ ಮಹೋತ್ಸವವನ್ನು ಯಾವುದೇ ಜಾತಿ ಭೇದವಿಲ್ಲದೆ ತಾರತಮ್ಯ ಮಾಡದೆ ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದಾರೆ. ಶಾಂತಿ, ಸಾಮರಸ್ಯದಿಂದ ಜೀವನ ಮಾಡಿಕೊಂಡು, ಜಾತ್ರಾ ಮಹೋತ್ಸವದಲ್ಲಿ ವಿಜೃಂಭಣೆಯಿಂದ ಸಡಗರದಿಂದ ಆಚರಣೆ ಮಾಡುತ್ತಿದ್ದೆವು. ಆದರೆ ಈ ವರ್ಷದ ಜಾತ್ರೆಗೆ ಭಂಗ ಉಂಟಾಗಿದೆ. ದಯಮಾಡಿ ತಾಲೂಕು ಆಡಳಿತ ಇದನ್ನು ಸರಿಪಡಿಸಿ ಜಾತ್ರಾ ಮಹೋತ್ಸವ ಮಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಚನ್ನಬಸವಯ್ಯ ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಮರಾಠಿ ಪಾಳ್ಯ, ಚನ್ನಿಗಯ್ಯ, ನಾಗರಾಜ್, ಚೆನ್ನಿಗರಾಯ, ಗೇಟಪ್ಪ, ಪುಟ್ಟರಾಜು, ಚಂದ್ರೇಶ್, ಚನ್ನಪ್ಪ, ಪ್ರದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.