ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಡಿಯೋಗಳ ಕುರಿತ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರ ದೂರಿಗೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಎಸ್ ಐಟಿ ರಚನೆ ಮಾಡಿ, ತನಿಖೆ ಮಾಡುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಏಪ್ರಿಲ್ 26ರಂದು ಮತದಾನ ಚಲಾಯಿಸಿದ ಪ್ರಜ್ವಲ್, ಏಪ್ರಿಲ್ 27ರ ಮುಂಜಾನೆ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಜರ್ಮನಿಯ ಫ್ರಾಂಕ್ಫರ್ಟ್ಗೆ ತೆರಳಿದ್ದಾರೆ ಎನ್ನಲಾಗಿದೆ. ಪೆನ್ಡ್ರೈವ್ ವೈರಲ್ ಆಗಿರುವ ಹಿನ್ನಲೆ ಮುಜುಗರದಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪರಾರಿಯಾಗಿದ್ದಾರಾ? ಅಥವಾ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ? ಎನ್ನುವ ಕುರಿತು ಚರ್ಚೆಗಳು ಆರಂಭವಾಗಿವೆ.
ಪ್ರಜ್ವಲ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ನೇತೃತ್ವದಲ್ಲಿ ಎಸ್ಐಟಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ ಬಿಜಯ್ ಕುಮಾರ್ ಸಿಂಗ್ ಅವರಿಗೆ ಈ ಪ್ರಕರಣದ ತನಿಖೆಯ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296