ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಪುಟ್ಟಸಂದ್ರ ಗ್ರಾಮದಲ್ಲಿ ಶ್ರೀ ಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಂಗಸಜ್ಜಿಕೆ ವರ್ಣ ವಸ್ತ್ರಾಲಂಕಾರ ಕೊಡಿಗೇನಹಳ್ಳಿ ನಾಗರಾಜಕೊಡಿಗೇನಹಳ್ಳಿ ನಾಗರಾಜುರವರ ಶ್ರೀಲಕ್ಷ್ಮೀನರಸಿಂಹಸ್ವಾಮಿ ಡ್ರಾಮಾ ಸೀನ್ಸ್ ಮತ್ತು ಶ್ರೀ ವಿಷ್ಣು ಸಾಯಿ ಕಲಾವಿದರ ಸಂಘ ತುಮಕೂರು ಇವರ ಕಲಾ ತಂಡದ ವತಿಯಿಂದ ಪುಟ್ಟ ಸಂಗ್ರಾಮದಲ್ಲಿ ಶ್ರೀ ಕುರುಕ್ಷೇತ್ರ ನಾಟಕವನ್ನು ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ದಿವಂಗತ ಚನ್ನಿಗಪ್ಪ ರವರ ಹಿರಿಯ ಪುತ್ರ ಅರುಣ್ ಕುಮಾರ್ , ಕೊರಟಗೆರೆ ವಿಧಾನಸಭಾ ಕ್ಷೇತ್ರವು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಶ್ರಮವಹಿಸಿ ಪ್ರಸ್ತುತ ಸರ್ಕಾರದಿಂದ ನೂರಾರು ಕೋಟಿ ಅನುದಾನತಂದು ಕ್ಷೇತ್ರವನ್ನು ಸಾಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಡಾ.ಜಿ ಪರಮೇಶ್ವರ್ ಅವರನ್ನು ಗೆಲ್ಲಿಸಿ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ. ಹಾಗೆಯೇ ತುಮಕೂರು ಜಿಲ್ಲೆಯ ಹೆಸರಾಂತ ರಾಜಕಾರಣಿಯಾದ ಕೆ.ಎನ್ .ರಾಜಣ್ಣ ರವರನ್ನು ಮಧುಗಿರಿ ಕ್ಷೇತ್ರದಿಂದ ಗೆಲ್ಲಿಸಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದು ಅವರನ್ನು ಮಂತ್ರಿಯನ್ನಾಗಿ ಮಾಡುವುದು ಕೂಡ ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ ಎಂದರು.
ಡಾ.ಜಿ.ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ರವರು ತುಮಕೂರು ಜಿಲ್ಲೆಗೆ ಎರಡು ಕಣ್ಣುಗಳಿದ್ದಂತೆ ಆದ್ದರಿಂದ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿ ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಮುನ್ನುಡಿ ಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅರುಣ್ ಕುಮಾರ್ ಅವರಿಗೆ ಮತ್ತು ರಂಗಭೂಮಿ ಕಲಾವಿದರಿಗೆ ಹಾಗೂ ಕಲಾವಿದ ಕ್ಷೇತ್ರದಲ್ಲಿ ಸಾಧನೆಗೈದ ಹಲವು ಹಿರಿಯ ಮತ್ತು ಕಿರಿಯ ಕಲಾವಿದರುಗಳಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ರಂಗಭೂಮಿ ಮತ್ತು ಕೊರಟಗೆರೆ ತಾಲ್ಲೂಕಿನ ರಂಗಭೂಮಿ ಕಲಾವಿದರುಗಳು ಮತ್ತು ಪುಟ್ಟಸಂದ್ರ ಮತ್ತು ಅಕ್ಕಪಕ್ಕದ ಊರಿನ ಗ್ರಾಮಸ್ಥರು ಕಲಾವಿದರು, ಕಲಾ ಪ್ರೋತ್ಸಾಹಕರು, ಹಿರಿಯ ಮುಖಂಡರು ಮತ್ತು ಯುವ ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB