ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲ ಜಿ.ಮನೋಹರ ವಿರುದ್ಧ ಸೂಕ್ತ ಕ್ರಮಕ್ಕೆ ಹಿರಿಯೂರು ಕಾಂಗ್ರೆಸ್ ಪಕ್ಷದಿಂದ ಚಿತ್ರದುರ್ಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾಧಿಕಾರಿ ಗಳಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಹಿರಿಯೂರು ನಗರದಲ್ಲಿ ಮಂಗಳವಾರದಂದು ನಡೆದ ಭಜರಂಗ ದಳದ ಕಾರ್ಯಕರ್ತ ಹರ್ಷಾ ಕೊಲೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಹಿರಿಯೂರು ಬಾಲಕಿಯರ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾದ ಜಿ ಮನೋಹರ ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿದರು.
ಕಳೆದ ಎರಡು ವರ್ಷಗಳಿಂದ ಕೊರೊಣ ಎಂಬ ಮಹಾಮಾರಿಯಿಂದ ವಿದ್ಯಾರ್ಥಿಗಳ ಭವಿಷ್ಯ ನೆಲಕಚ್ಚಿದೆ . ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗ ಬೇಕಿರುವ ಪ್ರಾಂಶುಪಾಲರು, ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಸಂಘ ಪರಿವಾರಕ್ಕೆ ಕಳುಹಿಸಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದೇ ಕಾಣುತ್ತಿಲ್ಲ , ಮಕ್ಕಳ ಭವಿಷ್ಯವನ್ನು ಕಲ್ಪಿಸಿಕೊಂಡು ದಿನನಿತ್ಯ ಕೂಲಿನಾಲಿ ಮಾಡಿ ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಹೊತ್ತು, ಪೋಷಕರು ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಿದರೆ, ಇಲ್ಲಿನ ಪ್ರಾಂಶುಪಾಲರು ಮಕ್ಕಳ ವಿದ್ಯಾಭ್ಯಾಸದ ಬದಲಾಗಿ ಪ್ರತಿಭಟನೆಗೆ ಕಳುಹಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಗುರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮಾಜಿ ಜಿ.ಪಂ.ಸದಸ್ಯ ಆರ್.ನಾಗೇಂದ್ರ ನಾಯ್ಕ್, ಹಿರಿಯೂರು ತಾಲ್ಲೂಕಿನ ಪಿ.ಎಲ್.ಡಿ. ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಸಾದತ್ ಉಲ್ಲ, ಮಾಜಿ ತಾ.ಪಂ. ಸದಸ್ಯ ಫ್ರಕ್ರುದ್ದೀನ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ರಜಿಯಾ ಸುಲ್ತಾನ್, ಜಿಲ್ಲಾ ಎಸ್.ಸಿ. ಸೆಲ್ ಪರಮೇಶ್, ಜಿಲ್ಲಾ ಎಸ್.ಟಿ ಸೆಲ್ ಚಿದಾನಂದಸ್ವಾಮಿ ಹಾಗೂ ಮುಖಂಡರುಗಳಾದ ಜ್ಞಾನೇಶ್, ಐಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಲ್ಲಟ್ಟಿ ಹರೀಶ್, ಮತ್ತು ಜಿ.ದಾದಾಪೀರ್, ದರ್ಶನ್, ಯಳನಾಡು ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್, ( ಚಿತ್ರದುರ್ಗ– ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB