nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025
    Facebook Twitter Instagram
    ಟ್ರೆಂಡಿಂಗ್
    • ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು
    • ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 
    • ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್
    • ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು
    • ಸಮಾಜಕ್ಕೆ ದುಡಿಯುವವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಶಾಸಕ ಅನೀಲ್ ಚಿಕ್ಕಮಾಧು ವಿರುದ್ಧ ಅಪಪ್ರಚಾರಕ್ಕೆ ಮುಖಂಡ ಶ್ರೀನಿವಾಸ ತಿರುಗೇಟು!
    • ವಿದ್ಯಾರ್ಥಿಗಳು ಕೆಟ್ಟ ಹವ್ಯಾಸಗಳಿಂದ ದೂರವಿರಬೇಕು: ಎಚ್.ಸಿ. ಶೋಭಾ
    • ಸರಗೂರು: ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಮ್ಮ ಪ್ರಾಣವನ್ನು ಪಣಕ್ಕಿಟ್ಟು ವಿಮಾನ ಉಳಿಸಿಕೊಂಡಿದ್ದ ವರುಣ್ ಸಿಂಗ್
    ರಾಷ್ಟ್ರೀಯ ಸುದ್ದಿ December 15, 2021

    ತಮ್ಮ ಪ್ರಾಣವನ್ನು ಪಣಕ್ಕಿಟ್ಟು ವಿಮಾನ ಉಳಿಸಿಕೊಂಡಿದ್ದ ವರುಣ್ ಸಿಂಗ್

    By adminDecember 15, 2021No Comments1 Min Read
    varun singh

    ನವದೆಹಲಿ: ತಮಿಳುನಾಡಿನಲ್ಲಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಅನುಭವಿ ಪೈಲಟ್‌ ಎನಿಸಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಂಗಳೂರಿನ ಕಮಾಂಡೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

    2020ರಲ್ಲಿ, ಲಘು ಯುದ್ಧವಿಮಾನ (ಎಲ್‌ಸಿಎ) ತೇಜಸ್‌ ತಾಂತ್ರಿಕ ವೈಫಲ್ಯದಿಂದ ಪತನವಾಗುವ ಅಪಾಯವಿದ್ದಾಗಲೂ, ತಮ್ಮ ಪ್ರಾಣವನ್ನು ಲೆಕ್ಕಿಸದೆ ಅದನ್ನು ರಕ್ಷಿಸಿದ್ದ ವರುಣ್ ಸಿಂಗ್ ಅವರಿಗೆ ಸ್ವಾತಂತ್ರ್ಯೋತ್ಸವದಲ್ಲಿ ಶೌರ್ಯಚಕ್ರ ನೀಡಲಾಗಿತ್ತು.


    Provided by
    Provided by

    ವರುಣ್ ಸಿಂಗ್ ಅವರು ಎಲ್‌ ಸಿಎ ಸ್ಕ್ವಾಡ್ರನ್‌ ನಲ್ಲಿ ಪೈಲಟ್ ಆಗಿದ್ದರು. ಯುದ್ಧವಿಮಾನದಲ್ಲಿ ಕಾಣಿಸಿದ್ದ ತಾಂತ್ರಿಕ ದೋಷವ‌ನ್ನು ಸರಿಪಡಿಸಿದ ಬಳಿಕ, ಅದನ್ನು ಪರೀಕ್ಷಾರ್ಥವಾಗಿ ಹಾರಾಟ ನಡೆಸುವ ಹೊಣೆಯನ್ನು ವರುಣ್ ಹೊತ್ತಿದ್ದರು. ಅತ್ಯಂತ ಎತ್ತರದ ಪ್ರದೇಶದಲ್ಲಿ ವಿಮಾನ ನಿಯಂತ್ರಣ ವ್ಯವಸ್ಥೆ ಮತ್ತು ವಿಮಾನದೊಳಗಿನ ಗಾಳಿಯ ಒತ್ತಡ ವ್ಯವಸ್ಥೆಯನ್ನು ಅವರು ಪರೀಕ್ಷಿಸಬೇಕಿತ್ತು.

    ಅತ್ಯಂತ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ ಇರುವುದನ್ನು ಅವರು ಪತ್ತೆಹಚ್ಚಿದರು. ತಕ್ಷಣ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಅವರು ಮುಂದಾದರು. ವಿಮಾನವನ್ನು ಇಳಿಸುವಾಗ ವಿಮಾನ ನಿಯಂತ್ರಣ ವ್ಯವಸ್ಥೆ ಕೈಕೊಟ್ಟಿತು. ಪೈಲಟ್‌ ಗೆ ವಿಮಾನದ ಮೇಲಿದ್ದ ನಿಯಂತ್ರಣ ಸಂಪೂರ್ಣವಾಗಿ ಕೈತಪ್ಪಿತು. ಇದು ದೊಡ್ಡ ದುರಂತ ಉಂಟಾಗುವ ಸೂಚನೆಯಾಗಿತ್ತು. ಲ್ಯಾಂಡಿಂಗ್‌ ಮಾಡಲು ಯತ್ನಿಸಿದಾಗ, ನಿಯಂತ್ರಣಕ್ಕೆ ಸಿಗದೇ ವಿಮಾನವು ರಭಸದಿಂದ ನೆಲದತ್ತ ಬೀಳಲಾರಂಭಿಸಿತು. ಇದು ಜೀವಕ್ಕೆ ತೀವ್ರ ಅಪಾಯ ತಂದೊಡ್ಡುವ ಪರಿಸ್ಥಿತಿ. ದೈಹಿಕ ಹಾಗೂ ಮಾನಸಿಕ ಬಲವನ್ನು ಕುಗ್ಗಿಸುವ ಈ ಸ್ಥಿತಿಯನ್ನು ಹತೋಟಿಗೆ ತಂದ ವರುಣ್ ಸಿಂಗ್, ತಮ್ಮ ಚಾಲನಾ ಕೌಶಲಗಳನ್ನು ಬಳಸಿ ವಿಮಾನವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದರು.

    ವಿಮಾನವು ಚಾಲಕನ ನಿಯಂತ್ರಣ ತಪ್ಪಿದಾಗ ಅದರಿಂದ ಹೊರ ಬಂದು ಜೀವ ಉಳಿಸಿಕೊಳ್ಳುವ ಆಯ್ಕೆ ಪೈಲೆಟ್ ಗೆ ಇರುತ್ತದೆ ಆದರೆ, ವರುಣ್ ಸಿಂಗ್ ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ವಿಮಾನವನ್ನು ಉಳಿಸಿಕೊಂಡಿದ್ದರು. ಇಂತಹ ಧೈರ್ಯವಂತ ಅಧಿಕಾರಿಯನ್ನು ಕಳೆದುಕೊಂಡ ದೇಶ ತೀವ್ರ ದುಃಖದಲ್ಲಿದೆ.

    admin
    • Website

    Related Posts

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಸರಗೂರು:  ಗುರು ಪೂರ್ಣಿಮಾವನ್ನು ಆಷಾಢ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಗುರು ಪೂರ್ಣಿಮಾವನ್ನು ಗುರು ಮತ್ತು ಶಿಷ್ಯರ ನಡುವಿನ ಬಾಂದವ್ಯವನ್ನು…

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025

    ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು

    July 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.