ಕೊರಟಗೆರೆ: ದೇಶ ಹಾಗೂ ರಾಜ್ಯದ ಯುವಜನತೆಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಗಳ ಜ್ಞಾನವಿದ್ದಾಗ ಮಾತ್ರ ಮನುಷ್ಯತ್ವ ಗುಣವುಳ್ಳಲು ಸಾಧ್ಯ ಎಂದು ಸಾಹಿತಿ, ಸಂಸ್ಕೃತಿ ಚಿಂತಕರಾದ ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯ ನಂತರ ಮಾತನಾಡಿ, ಮೇಲ್ನೋಟಕ್ಕೆ ನಾವೆಲ್ಲರೂ ಮನುಷ್ಯರೇ, ಆದರೆ ಪ್ರತಿಯೊಬ್ಬ ಯುವಕರಲ್ಲಿ ಒಂದೊಂದು ರೀತಿಯ ಕಲಾವಿದ ಇರುತ್ತಾನೆ. ನಿಜವಾದ ಕಲಾವಿದ ಕಣ್ಣೀರು ಹಾಕುವುದು ಬೇಕಾಗಿಲ್ಲ ಆದರೆ ಅವನ ಅಂತರಾಳದಿಂದ ಕಣ್ಣೀರು ತೆಗೆಯಬೇಕಾಗುತ್ತದೆ. ನಮ್ಮ ದೇಶದಲ್ಲಿ ಇಂದು ಜಾತಿ ಮತ್ತು ಪಂತಗಳ ಪಟ್ಟಿ ಎಣಿಕೆ ಮಾಡಲು ನಾವೆಲ್ಲರೂ ಶುರು ಮಾಡಿದ್ದೇವೆ ಎಂದರು.
ಪ್ರಾಣ ಯಾವ ಧರ್ಮ, ಮತ, ಪಕ್ಷಕ್ಕೆ ಸೀಮಿತವಲ್ಲಾ. ಯಾವುದೋ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿ ಸತ್ತಾಗ ನಮಗೆ ಕರುಣೆ ಅನ್ನೋದು ಬರಬೇಕಲ್ವಾ ಹಾಗಾದರೆ ಇಂದು ನಾವು ಯಾವ ಕಡೆ ಸಾಗುತ್ತೀದ್ದೇವೆ ಎಂಬುದನ್ನು ಯುವಕರು ಒಮ್ಮೆ ಯೋಚಿಸುವುದು ಬಹುಮುಖ್ಯ ಎಂದು ಹೇಳಿದರು.
ಸರಿಗಮಪ ಪ್ರಶಸ್ತಿ ವಿಜೇತ ಕಂಬದರಂಗಯ್ಯ ಸಾಂಸ್ಕೃತಿಕ ಸಂಭ್ರಮ ಉದ್ದೇಶಿಸಿ ಮಾತನಾಡಿ, ಬಡತನ, ಛಲ, ಆತ್ಮಸ್ಥೈರ್ಯವೇ ಸರಿಗಮಪದಲ್ಲಿ ವಿಜೇತನಾಗಲು ಸಾಧ್ಯವಾಯಿತು. ಬಾಲ್ಯದಲ್ಲಿ ಹೆಚ್ಚಾಗಿ ವಿದ್ಯಾಭ್ಯಾಸದ ಕಡೆ ಗಮನವಿತ್ತು. ಆದರೆ ಬಡತನ ವಿದ್ಯಾಭ್ಯಾಸವನ್ನು ಮುಂದುವರೆಸಲು ಬಿಡಲಿಲ್ಲ. ತುಮಕೂರಿನ ಆಕೇಸ್ಟ್ರಾ ಒಂದರಲ್ಲಿ 10 ವರ್ಷಗಳವರೆಗೆ ಕೆಲಸ ಮಾಡಿದ್ದೆ. ನಂತರ ಸಂಗೀತ ಸಂಯೋಜಕ ಡಾ.ಹಂಸಲೇಖರವರು ಪ್ರೋತ್ಸಾಹ ನೀಡಿ ಝೀ ಕನ್ನಡ ವಾಹಿನಿಯ ನೇತೃತ್ವದ ಸರಿಗಮಪ ವೇದಿಕೆಯಲ್ಲಿ ಹಾಡಲು ಅವಕಾಶ ಕಲ್ಪಿಸಿ ಕೊಟ್ಟಿದರಿಂದಲೇ ನಿಮ್ಮ ಪ್ರೀತಿ ವಿಶ್ವಾಸವನ್ನು ಗಳಿಸಲು ಸಾಧ್ಯವಾಯಿತು ಎಂದರು.
ಪ್ರಾಂಶುಪಾಲರಾದ ಡಾ. ಪ್ರಸನ್ನ ಮಾತನಾಡಿ, ಸಾಹಿತಿ ಬರಗೂರು ರಾಮಚಂದ್ರಪ್ಪ ಹಾಗೂ ಸರಿಗಮಪ ವಿಜೇತ ಕಂಬದರಂಗಯ್ಯ ಇಬ್ಬರೂ ಸಹ ಅವರದ್ದೇ ಆದ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳು ಅವರ ಜೀವನದ ಪ್ರತಿಯೊಂದು ಉತ್ತಮ ಅಂಶವನ್ನು ಅಳವಡಿಸಿಕೊಳ್ಳಿ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಂಜಿಸುತ್ತಿರುವುದು ನಮ್ಮೆಲ್ಲರಾ ಸೌಭಾಗ್ಯ ಎಂದು ಹೇಳಿದರು.
ಕಾರ್ಯಕ್ರಮದ ವೇಳೆ ಕಾಲೇಜು ವಿದ್ಯಾರ್ಥಿಗಳು ಕರುನಾಡ ರತ್ನ ಡಾ. ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನು ಶಾಲಾ ಕಟ್ಟಡದ ಮೇಲೆ ಹಾರಿಸಿ ಎಲ್ಲರೂ ಸಂಭ್ರಮಿಸಿ ಅಪ್ಪು ಹಾಡಿಗೆ ಮೆಲುಕು ಹಾಕಿದರು.
ಈ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಓ ನಾಗರಾಜು, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಶಿವನಂಜಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಭೋದಕ ಮತ್ತು ಭೋದಕೇತರರು, ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz