ಹೆಚ್.ಡಿ,ಕೋಟೆ: ಹಂಸಲೇಖರವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿರುವ ಸಂಸದ ಪ್ರತಾಪಸಿಂಹ ಮತ್ತು ಮೀರಾ ರಾಘವೇಂದ್ರ ವಿರುದ್ಧ ಕೋಟೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರವರಿಂದ ಮಿನಿ ವಿಧಾನಸೌಧ ಪ್ರತಿಭಟನೆ ನಡೆಸಿತು.
ಹೆಚ್.ಡಿ.ಕೋಟೆ ತಾಲ್ಲೂಕಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ( ಅಂಬೇಡ್ಕರ್ ವಾದ) ಕೋಟೆ ಮತ್ತು ಸರಗೂರು ತಾಲ್ಲೂಕು ಸಮಿತಿದಿಂದ ಪ್ರತಿಭಟನೆ ನಡೆಸಿದರು. ಡಾ.ಹಂಸಲೇಖರಂತಹ ಸಾಧಕನೊಬ್ಬ ಬಹಿರಂಗವಾಗಿ ದಲಿತರ ಪರ ಮಾತನಾಡಿರುವುದು ಶೇಕಡ 2% ಜನವಿರುವ ಶಿಷ್ಯ ವೃಂದಕ್ಕೆ ನೋವುವಾಗಿದೆ ಅಷ್ಟೇ . ಆದರೂ ಸಹ ಹಂಸಲೇಖ ರವರು ಈಗಾಗಲೇ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಆದರೂ ಅವರ ವಿರುದ್ಧ ಟೀಕೆಗಳನ್ನು ಮಾಡುತ್ತಿರುವುದು ದುರಂತ ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಚಾ.ಶಿವಕುಮಾರ್ ಹೇಳಿದರು.
ಹಂಸಲೇಖ ಅವರನ್ನು ತೇಜೋವಧೆ ಮಾಡುವ ಮೂಲಕ ಅಶಾಂತಿ ಉಂಟು ಮಾಡುತ್ತಿರುವ ಸಂಸದ ಪ್ರತಾಪಸಿಂಹ ಹಾಗೂ ಮೀರಾ ರಾಘವೇಂದ್ರ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್ ಒತ್ತಾಯಿಸಿದರು.
ನಾದಬ್ರಹ್ಮ ಮಹಾ ಮಾನವತಾವಾದಿ ಜಾತ್ಯತೀತವಾದಿ ಇರುವ ಸತ್ಯವನ್ನು ಹೇಳಿದ್ದಾರೆ. ಡಾ. ಹಂಸಲೇಖರವರಿಗೆ ಸೂಕ್ತ ರಕ್ಷಣೆ ಸರ್ಕಾರವೇ ನೀಡಬೇಕೆಂದು ಸಂಘಟನೆಗಳ ಮುಖಂಡರು ಇದೇ ವೇಳೆ ಒತ್ತಾಯಿಸಿದರು
ಇದೇ ವೇಳೆ ಸ್ಥಳಕ್ಕೆ ತಹಶೀಲ್ದಾರ್ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ತಹಶೀಲ್ದಾರ್ ನರಗುಂದ ಅವರು ಸ್ಥಳಕ್ಕೆ ಆಗಮಿಸಿ ಮನವಿ ಪಡೆದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.
ಈ ಸಂದರ್ಭ ಜಿಲ್ಲಾ ಸಂಘಟನೆ ಸಂಚಾಲಕರಾದ ಚಾ.ಶಿವಕುಮಾರ್, ದೊಡ್ಡಸಿದ್ದು, ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್, ಟೌನ್ ಸಂಚಾಲಕ ಸೋಮಣ್ಣ(ಚನ್ನ), ಬಸವರಾಜು. ಕುಮಾರ್ ಚಂಗೌಡನಹಳ್ಳಿ, ಮಹದೇವಸ್ವಾಮಿ ಹಾದನೂರು, ಮಾಲಗಯ್ಯ, ರಾಚಪ್ಪ ಕೆ ಜಿ ಹಳ್ಳಿ, ಮಹೇಶ್ ದೀಪು, ಸಾಗರೆ ಶಿವರಾಜ್, ಸರಗೂರು ಕೃಷ್ಣಮೂರ್ತಿ, ಸುರೇಶ್ ರವಿ ಹೊಸಹಳ್ಳಿ.ಇನ್ನಿತರರು ಇದ್ದರು.
ವರದಿ: ಚಂದ್ರಹಾದನೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700