ಪಾವಗಡ: ತಾಲ್ಲೂಕು ಸಿ ಕೆ ಪುರ ಕ್ಲಸ್ಟರ್ ಪಾವಗಡ ತಾಲೂಕು ನಿಡಗಲ್ಲು ಹೋಬಳಿ ವ್ಯಾಪ್ತಿಯ ಹರಿಹರಪುರ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೊತ್ತೂರು ಗ್ರಾಮದ ರತ್ನಮ್ಮ ಕೊಂಡಪ್ಪ, ಈ ಶಾಲೆಯಲ್ಲಿ 135 ಜನ ಮಕ್ಕಳಿದ್ದು, ಇವರಿಗೆ ನಮ್ಮ ಗ್ರಾಮ ಪಂಚಾಯತಿ ಪಿಡಿಓ, ನಾವು ನಮ್ಮ ಸದಸ್ಯರೆಲ್ಲರೂ ಸೇರಿ ಪರಿಶುದ್ಧ ಕುಡಿಯುವ ನೀರು ಒದಗಿಸುತ್ತೇನೆ ಇಂದು ಭರವಸೆ ನೀಡಿದರು.
ಈ ಶಾಲೆಯ ಕ್ಲಸ್ಟರ್ ಸಿ ಆರ್ ಪಿ ಮೂರ್ತಿ ಎಲ್. ಮಾತನಾಡಿ, ನಮ್ಮ ಕ್ಲಸ್ಟರ್’ನ ಎಲ್ಲಾ ಶಾಲೆಗಳಿಗೂ ಕುಡಿಯುವ ನೀರು ಕಲ್ಪಿಸಿ ಕೊಡಬೇಕು. ನಮ್ಮ ಕ್ಲಸ್ಟರ್ನ’ನ ಉತ್ತಂಡಪ್ಪನ ಪಾಳ್ಯ ಗ್ರಾಮದಲ್ಲಿ ಶಾಲೆಯಿದ್ದು, 12 ಜನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಓದುವುದಕ್ಕೆ ತುಂಬಾ ಅನಾನುಕೂಲವಾಗಿದೆ. ಇಲ್ಲಿ ಕೇವಲ ಎರಡು ಕೊಠಡಿಗಳಿದ್ದು ಒಂದು ಕೊಠಡಿ ಚೆನ್ನಾಗಿದ್ದು ಇನ್ನೊಂದು ಕೊಠಡಿ ಬಿದ್ದು ಹೋಗಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮುಖ್ಯೋಪಾಧ್ಯಾಯರಾದ ರಮೇಶ್ ರವರು ಮಾತನಾಡಿ, ಈ ಶಾಲೆಯಲ್ಲಿ ಬಡ ಸಮುದಾಯದವರ ಮಕ್ಕಳು ಓದುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶುದ್ಧವಾದ ಕುಡಿಯುವ ನೀರು, ಒದಗಿಸಬೇಕು ಎಂದು ನಾನು ಸುಮಾರು ಹದಿನೆಂಟು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದೇನೆ. ಇಂದು ನಮ್ಮ ಶಾಲೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿಡಿಒ, ಸದಸ್ಯರು ಎಲ್ಲಾ ಹೆಚ್ಚಿನದಾಗಿ ಬಂದಿದ್ದಾರೆ. ನಮ್ಮ ಶಾಲೆಯು ಅಭಿವೃದ್ಧಿ ಆಗಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಅಧಿಕಾರಿ ಸುದರ್ಶನವರು ಮಾತನಾಡಿದರು. ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರು, ಸಿ.ಕೆ.ಪುರ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಶಾಲೆಯ ಮಕ್ಕಳು, ಪೋಷಕರು, ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು.
ಮೂರ್ತಿ ಎಲ್. ಸಿ ಆರ್ ಪಿ ಸ್ವಾಗತಿಸಿದರು, ಹರಿಹರಪುರ ಮುಖ್ಯಶಿಕ್ಷಕ ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಿ.ಕೆ.ಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಮ್ಮ ಕೊಂಡಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುದರ್ಶನ್ ಭಾಗಿಯಾಗಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ ಪಾವಗಡ ತಾಲೂಕು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz