nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026
    Facebook Twitter Instagram
    ಟ್ರೆಂಡಿಂಗ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    ರಾಜ್ಯ ಸುದ್ದಿ August 27, 2024

    ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    By adminAugust 27, 2024No Comments2 Mins Read
    bedar

    ಬೀದರ: ನಗರದ ಭವಾನಿ ಮಂದಿರದಲ್ಲಿ ರವಿವಾರ ನೂತನವಾಗಿ ರಚನೆಯಾದ ಜಿಲ್ಲಾ ಉಪ್ಪಾರ ಸಮಾಜ ಸಂಘದ ಪದಾಧಿಕಾರಿಗಳ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

    ಜಿಲ್ಲಾ ಅಧ್ಯಕ್ಷ ತಾನಾಜಿ ಸಾಗರ್,ಗೌರವ ಅಧ್ಯಕ್ಷ ಜಗನಾಥ ಎಚ್ ಉಪ್ಪಾರ ಹಾಗೂ ಶಿವಾಜಿ ಭಾತಂಬ್ರಾ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಮಾರಂಭವನ್ನು ಉದ್ಘಾಟಿಸಿದರು.


    Provided by
    Provided by

    ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಗೌರವ ಅಧ್ಯಕ್ಷ ಶಿವಾಜಿ ಭಾತಂಬ್ರಾ, ನಮ್ಮ ಸಮಾಜ ಹಿಂದುಳಿದ ವರ್ಗಕ್ಕೆ ಸೇರಿದ್ದು ನಮ್ಮ ಸಮಾಜದ ತುಂಬಾ ಜನರು ಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ.ಆದರೂ ತಮ್ಮ ಮಕ್ಕಳ ಉಜ್ಜಲು ಭವಿಷ್ಯಕ್ಕಾಗಿ ಹಗಲಿರುಳೂ ಎನ್ನದೆ ಶ್ರಮಪಟ್ಟು ಮಕ್ಕಳಿಗೆ ಶಿಕ್ಷಣ ನೀಡಿ ಹೆಚ್ಚು ಅಂಕ ಪಡೆಯಲು ಕಾರಣಿಕರ್ತರಾದ ಪಾಲಕರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ ಅವರು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗುರುತಿಸಿ ಜಿಲ್ಲಾ ಉಪ್ಪಾರ ಸಮಾಜ ಸಂಘ ಸನ್ಮಾನಿಸಿ ಗೌರವಿಸುತ್ತಿರುವುದು ಬಹಳ ಸಂತಸದ ಕ್ಷಣವಾಗಿದೆ ಎಂದರು.

    ಉಪ್ಪಾರ ಸಮಾಜದ ಮುಖಂಡರು ತಮ್ಮ ಸಮಾಜದ ಬೆಳವಣಿಗೆಗೆ ಎಲ್ಲರೂ ಜಾಗೃತರಾಗಿ ಒಗ್ಗೂಡಿ ಸಂಘಟನೆಗೆ ಬಲ ಪಡಿಸುವ ಮೂಲಕ ಮುಂದುವರೆಸಿಕೊಂಡು ಹೋಗಬೇಕು ಅಂದಾಗೆ ನಮ್ಮ ಸಮಾಜದ ಬೆಳವಣಿಗೆ ಅಗಲ್ಲಿಕ್ಕೆ ಸಾಧ್ಯ ನಿಮ್ಮಿಂದ ಸಮಾಜದ ಏಳಿಗೆಗೆ ಶೃಮಿಸಲು ಆಗದೆ ಇದ್ದರು ಪರವಾಗಿಲ್ಲ ಆದರೆ ಇನ್ನೊಬ್ಬರು ಸಹ ನಿಮ್ಮ ಮಾರ್ಗದಲ್ಲಿಯೇ ನಡೆಯುವಂತ ಕೆಲಸ ಆಗಬಾರದು ಎಂದು ಮನವಿ ಮಾಡಿದರು.

    ಮುಖ್ಯ ಅತಿಥಿ ರವಿ ಉಪ್ಪಾರ ಸಮಾಜವನ್ನು ಉದ್ದೇಶಿಸಿ ಮಾತನಾಡಿದ ಅವರು ಕಷ್ಟದ ಜೀವನದ ಜೊತೆ ಹಗಲಿರುಳು ಎನ್ನದೆ ಶೃಮಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಗೈತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ನಾವು ನಮ್ಮ ಸಮಾಜವನ್ನು ಬೆಳೆಸಬೇಕು ಎಂದರೆ ಸಂಘಟನೆ ಮತ್ತು ಶಿಕ್ಷಣದ ಜೊತೆಗೆ ಒಗ್ಗೂಡಿ ಮುಂದುವರೆದರೆ ಮಾತ್ರ ಸಮಾಜದ ಏಳಿಗೆ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

    ಎಮ್.ಬಿ.ಬಿ.ಎಸ್ ವಿದ್ಯಾರ್ಥಿ ಮಹಾಂತೇಶ ಉಪ್ಪಾರ ಮಾತನಾಡಿ ಮೊನ್ನೆ ಕೋಲ್ಕತಾದಲ್ಲಿ ನಡೆದ ಘಟನೆಯನ್ನು ಸ್ಮರಿಸಿ ಬೇಸರ ವ್ಯಕ್ತಪಡಿಸಿದ ಅವರು ವೈದ್ಯರ ವೃತ್ತಿ ಒಂದು ರೀತಿಯ ದೇವರ ರೂಪದ ವೃತಿಯಾಗಿದ್ದು ಇದ್ದನು ನಾನು ಅಚ್ಚುಕಟ್ಟಾಗಿ ನಿರ್ವಹಿಸಿ ನಮ್ಮ ಸಮಾಜವನ್ನು ಮೇಲೆತ್ತುವ ಕೆಲಸ ಮಾಡುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕಾರ್ತಿಕಾ ಉಪ್ಪಾರ ಮಾತನಾಡಿ ಯಾವುದೇ ಒಂದು ಸಂಘಟನೆ ಬೇಳೆಯಬೇಕು ಎಂದರೆ ಇಂತಹ ಸಮಾರಂಭಗಳ ನಡಿದರೆ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಕಾರಣವೆಂದರೆ ಇಂತಹ ಸಮಾರಂಭಗಳಿಂದ ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಬಹುದು ಮತ್ತು ಹಿರಿಯರ ಮಾರ್ಗದರ್ಶನದಿಂದ ಸಂಘಟನೆಯ ಬೆಳವಣಿಗೆಗೆ ಪ್ರೊತ್ಸಹಿಸಿದಂತಾಗುತ್ತದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

    ತಿಪ್ಪಣ ಉಪ್ಪಾರ,ಮಾರುತಿ ಸಾಗರ ಮತ್ತು ದೀಪಿಕಾ ಉಪ್ಪಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ತಾನಾಜಿ ಸಾಗರ್ ಅಧ್ಯಕ್ಷಿಯ ನುಡಿ ನುಡಿದರು.

    ಬಸವರಾಜ ಉಪ್ಪಾರ ಅವರು ನಿರೂಪಿಸಿ ಸ್ವಾಗತಿಸಿದರು.ಅಭಂಗ ಉಪ್ಪಾರ ಅವರು ವಂದಿಸಿದರು.

    ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಎಮ್.ಬಿ.ಬಿ.ಎಸ್ ನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.

    ಇದೆ ವೇಳೆ ಜಿಲ್ಲಾ ಉಪ್ಪಾರ ಸಮಾಜದ ಉಪಾಧ್ಯಕ್ಷ ಅನೀಲ್ ಮುಸ್ತಾಪೂರ,ಕಲಪ್ಪಾ ಉಪ್ಪಾರ, ಶರಣಪ್ಪ ಅಣದೂರ, ನರಸಿಂಗ ಉಪ್ಪಾರ, ಸಾಗರ ಕೊಳ್ಳುರ, ಸಂಜು ಚಿಂತಾಕಿ ಮತ್ತು ಭೂಮಪ್ಪಾ ಬೆಲ್ದಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ಮಸೂದೆಯ ವಿರುದ್ಧ…

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.