ವರದಿ: ಮಂಜುಸ್ವಾಮಿ ಎಂ.ಎನ್.
ಕೊರಟಗೆರೆ : ಸಸ್ಯಕಾಶಿ, ಸಿದ್ದರ ತಪೋ ಭೂಮಿಯಲ್ಲಿ ಜೂ.21 ರಂದು ಬಾಳೆ ಹೊನ್ನೂರು ಖಾಸಾ ಶಾಖಾ ಮಠ, ಸಿದ್ಧರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮಿಗಳು ಸ್ವಾಮೀಜಿ ತಿಳಿಸಿದರು.
ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ ‘‘ಸಿದ್ದಶ್ರೀ ಪ್ರಶಸ್ತಿ’’ ಪ್ರಧಾನ ಮಾಡಲಾಗುತ್ತದೆ ಎಂದು ಹೇಳಿದರು.
ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ:
ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ಸಚಿವರಿಗೆ ಆಹ್ವಾನ
ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಡಿಸಿಎಂ ಡಾ.ಜಿ ಪರಮೇಶ್ವರ, ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ವಿ.ಸೋಮಣ್ಣ, ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ವೀರಭದ್ರಯ್ಯ, ಸಿದ್ದರಬೆಟ್ಟ ರೋಟರಿ ಅಧ್ಯಕ್ಷ ದರ್ಶನ್, ಮುಖಂಡರಾದ ಎಲ್.ರಾಜಣ್ಣ, ಸದಾಶಿವಯ್ಯ, ಮಹಾಲಿಂಗಯ್ಯ, ಪವನ್ ಕುಮಾರ್, ಎ.ಡಿ.ಬಲರಾಮಯ್ಯ, ಕಾಮರಾಜು, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಶಿವಾನಂದ್, ಕುಸುಮ ಜಗನ್ನಾಥ್, ದರ್ಶನ್ ಕೆ.ಎಲ್, ಕಾರ್ ಮಹೇಶ್, ಕಾಲೋನಿ ರಾಜಣ್ಣ, ಮಲ್ಲಯ್ಯ ಡಿ.ಎಲ್, ಕಿರಣ್ ಕುಮಾರ್, ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.
ಕಳೆದ 20 ವರ್ಷಗಳಿಂದ ಶ್ರೀಮಠದಲ್ಲಿ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ, ಭಕ್ತರ ಸಹಕಾರದಿಂದ ಮುಂದಿನ ದಿನಗಳಲ್ಲಿ ಪುಣ್ಯಕ್ಷೇತ್ರದ ಅಧಿಪತಿ ಶ್ರೀ ಸಿದ್ದೇಶ್ವರ ಸ್ವಾಮಿಗೆ ಪ್ರಿಯವಾದ ಹೋಳಿಗೆ-ತುಪ್ಪ ಪ್ರಸಾದವನ್ನು ವರ್ಷಪೂರ್ತಿ, ಪ್ರತಿದಿನ ಆಗಮಿಸುವ ಭಕ್ತರಿಗೆ ವಿತರಿಸುವ ಯೋಜನೆ ರೂಪಿಸಲಾಗಿದೆ.
— ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಬಾಳೆ ಹೊನ್ನೂರು ಖಾಸಾ ಶಾಖಾ ಮಠ. ಸಿದ್ದರಬೆಟ್ಟ ಶ್ರೀ ಕ್ಷೇತ್ರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


