ಮಧುಗಿರಿ: ಪ್ರೇರಣಾ ಫೌಂಡೇಶನ್ ಮಧುಗಿರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಹಾಗೂ ಮಹೇಶ್ ಶಿಕ್ಷಣ ಸಂಸ್ಥೆ ಅಶೋಕ ನಗರ ತುಮಕೂರು ವತಿಯಿಂದ ಮಧುಗಿರಿ ಕನ್ನಡ ಭವನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಪರೀಕ್ಷಾ ಸಿದ್ಧತಾ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೇರಣಾ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಎಸ್.ಆರ್. ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಫೌಂಡೇಶನ್ ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶ ಹಾಗೂ ಮಧುಗಿರಿ ತಾಲ್ಲೂಕು ಮಕ್ಕಳು ರಾಜ್ಯದಲ್ಲಿ ಮೊದಲ ಶ್ರೇಣಿಯಲ್ಲಿ ತೇರ್ಗಡೆ ಹೊಂದಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸುತ್ತಿರುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜನಾರ್ಧನ ರವರು ಪರೀಕ್ಷಾ ಸಿದ್ಧತಾ ಕಾರ್ಯಾಗಾರದ ಬಗ್ಗೆ ವಿದ್ಯಾರ್ಥಿಗಳೂಂದಿಗೆ ಸಂವಾದ ನಡೆಸಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸಹನಾ ನಾಗೇಶ್, ಮಾರುತಿ ಇಂಟರ್ನೆಟ್ ಸಂಸ್ಧೆಯ ರಮೇಶ್, ಮಹೇಶ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಿದ್ಯಾ ಪಾಟೇಲ್, ಎಸ್ ಎಸ್ ಎಲ್ ಸಿ ನೋಡಲ್ ಅಧಿಕಾರಿಗಳಾದ ಹೇಮಲತಾ, ಮಾರುತಿ, ಪ್ರಾಣೇಶ್, ಪತ್ರಕರ್ತ ನಂದೀಶ್ ನಾಯ್ಕ ಪಿ, ಹಾಗೂ ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರುಗಳೂ ಹಾಗೂ ಅಧ್ಯಾಪಕರುಗಳು ಮತ್ತು ಸುಮಾರು 850 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5