nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ

    December 5, 2025

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025
    Facebook Twitter Instagram
    ಟ್ರೆಂಡಿಂಗ್
    • ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    ಕೊರಟಗೆರೆ November 20, 2025

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    By adminNovember 20, 2025No Comments2 Mins Read
    manjunath k

    ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು ವೇಳೆ ಕಟಾವು ಯಂತ್ರದ ಮಾಲಿಕರು/ ಗುತ್ತಿಗೆದಾರರು ರೈತರಿಂದ ಹೆಚ್ಚಿಗೆ ಬಾಡಿಗೆ ಹಣವನ್ನು ಕೇಳಿದರೆ ಅವರ ವಿರುದ್ದ ವಿಪತ್ತು ನಿರ್ವಹಣೆ ಕಾಯ್ದೆ 2005 ರ ಪ್ರಕಾರ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದ್ದಾರೆ.

    ತಾಲ್ಲೂಕು ಕಛೇರಿ ಸಭಾಂಗಣದಲ್ಲಿ, ರೈತರ ಮುಖಂಡರು ಹಾಗೂ ರಾಗಿ ಕಟಾವು ಯಂತ್ರಗಳ ಮಾಲೀಕರೊಂದಿಗೆ ಚರ್ಚೆ ನಡೆಸಿ, ಕೊರಟಗೆರೆ ತಾಲ್ಲೂಕಿನಲ್ಲಿ 2025–26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 12180 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಕಳೆದ ವರ್ಷಕ್ಕೆ ಹೊಲಿಕೆ ಮಾಡಿದರೆ ಈ ವರ್ಷ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು 3000 ಹೆಕ್ಟೇರ್ ನಷ್ಟು ಹೆಚ್ಚಾಗಿ ರಾಗಿ ಬೆಳೆಯು ಬಿತ್ತನೆಯಾಗಿದ್ದು  ರಾಗಿ ಬೆಳೆಯು  ಕಟಾವು ಹಂತದಲ್ಲಿ ಇರುತ್ತದೆ.


    Provided by
    Provided by

    ಈಗಾಗಲೇ ಕಟಾವು ಕಾರ್ಯ ಪ್ರಾರಂಭವಾಗಿದ್ದು ಬಳ್ಳಾರಿ ಜಿಲ್ಲೆಯಿಂದ ತಾಲ್ಲೂಕಿಗೆ 15–20 ಕಟಾವುಯಂತ್ರಗಳು ಬಂದಿದ್ದು ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವುಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ನವಂಬರ್ 11ರಂದು ಜಿಲ್ಲಾಧಿಕಾರಿಗಳವರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಕಟಾವು ಯಂತ್ರದ ಬಾಡಿಗೆ ದರವನ್ನು ನಿಗಧಿಪಡಿಸಲಾಗಿದೆ.

    ಆದ್ದರಿಂದ ಕಟಾವು ಯಂತ್ರದ ಮಾಲೀಕರು,ಗುತ್ತಿಗೆದಾರರು ನಿಗಧಿಪಡಿಸಿದ ದರವನ್ನು ರೈತ ಭಾಂದವರಿಂದ ಮಾತ್ರ ಪಡೆಯಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ರುದ್ರಪ್ಪ ಎಂ ಆರ್ ರವರು ಮಾತನಾಡಿ, ಟ್ರ್ಯಾಕ್ಟರ್ ಚಾಲಿತ ಕಟಾವು ಯಂತ್ರಗಳಿಗೆ ರೂ. 2400ಗಳನ್ನು ನಿಗದಿ ಮಾಡಿದ್ದು ರಾಗಿ ಕಟಾವು ನಂತರ ಕಂತೆ ಮಾಡಲು ಬೇಲರ್‌ ಗಳನ್ನು ಬಳಸುತ್ತಿದ್ದು ಪ್ರತಿ ಕಂತೆಗೆ ರೂ, 25/- ಗಳನ್ನು ನಿಗದಿ ಮಾಡಿದ್ದು,   ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಹಣ ರೈತರಿಂದ ವಸೂಲಿ ಮಾಡುತ್ತಿದ್ದರೆ, ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ, ಕಂದಾಯ ಇಲಾಖೆಯ ಅಧಿಕಾರಿಗಳಿಗಾಗಲಿ ಅಥವಾ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಕೃಷಿ ಇಲಾಖೆಯ ಸಿಬ್ಬಂದಿಗಳಾದ ನರಸಿಂಹಮೂರ್ತಿ ನಾಗರಾಜು ವೆಂಕಟೇಶ್, ರೈತ ಮುಖಂಡರು ಹಾಗೂ ಕಟಾವು ಯಂತ್ರಗಳ ಮಾಲೀಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

    November 29, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ

    December 5, 2025

    ಚೇಳೂರು: ಗ್ರಾಮದ ಮಹಾಲಕ್ಷ್ಮಿ ಬ್ಯಾಂಕರ್ ಮತ್ತು ಜ್ಯುವೆಲ್ಲರ್ಸ್ ಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಡಿಸೆಂಬರ್ 4ರಂದು ಬೆಳಗ್ಗೆ…

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.