ಮೇ 10 ರಂದು ಕರ್ನಾಟಕದ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ವಿಡಿಯೋ ಸಂದೇಶದ ಮೂಲಕ ಕರ್ನಾಟಕದ ಜನತೆಯನ್ನು ತಲುಪುವ ಪ್ರಯತ್ನ ಮಾಡಿರುವ ಪ್ರಧಾನಿ ಮೋದಿ ಮೇ 10 ರಂದು ತಪ್ಪದೇ ಮತದಾನ ಎಂದು ಮನವಿ ಮಾಡಿದ್ದಾರೆ.
ನೀವು ನನಗೆ ಸದಾ ಪ್ರೀತಿ ಕೊಟ್ಟಿದ್ದೀರಿ ಅದು ನನಗೆ ಈಶ್ವರನ ಆರ್ಶೀವಾದವಿದ್ದಂತೆ, ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ ಎನಿಸಿಕೊಂಡಿದೆ. ಆದಷ್ಟು ಬೇಗ ಕರ್ನಾಟಕವನ್ನು ದೇಶದ ಆರ್ಥಿಕತೆಯ ನಂಬರ್ 1 ರಾಜ್ಯವನ್ನಾಗಿ ಮಾಡಬೇಕಿದೆ. ಎಲ್ಲರ ಲಕ್ಷ್ಯ ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಎಕಾನಮಿಯತ್ತ ಕೊಂಡೊಯ್ಯುವುದಾಗಿರಬೇಕು.
ಕೊರೊನಾ ಬಳಿಕವು ದೇಶದಕ್ಕ 90 ಸಾವಿರ ಕೋಟಿಯಷ್ಟು ವಿದೇಶಿ ಬಂಡವಾಳ ಹೂಡಿಕೆಯಾಗಿದೆ, ಆದರೆ ಕಳೆದ ಸರ್ಕಾರದಲ್ಲಿ ಕೇವಲ 30 ಸಾವಿರ ಕೋಟಿಯಷ್ಟು ಮಾತ್ರ ವಿದೇಶಿ ಬಂಡವಾಳ ಹೂಡಿಕೆಯಾಗಿತ್ತು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


