ಬೆಂಗಳೂರು: ಮೋದಿಯವರ ಎರಡನೇ ಸುತ್ತಿನ ಚುನಾವಣಾ ಪ್ರಚಾರ ಇದಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಏ.14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಡಾ.ಕೆ. ಸುಧಾಕರ್ ಸ್ಪರ್ಧಿಸಿರುವ ಚಿಕ್ಕಬಳ್ಳಾಪುರ ಹಾಗೂ ಶೋಭಾ ಕರಂದ್ಲಾಜೆ ಸ್ಪರ್ಧಿಸಿರುವ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಸಾರ್ವಜನಿಕ ಸಭೆ ಆಯೋಜನೆಗೆ ಸಿದ್ಧತೆ ನಡೆಸಿದೆ.
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ ನಡೆಸಲು ಪಕ್ಷ ಯೋಚಿಸಿದೆ. ಆದರೆ ಪ್ರಧಾನಮಂತ್ರಿ ಕಚೇರಿ ಸೂಚನೆಯನ್ವಯ ಮೋದಿ ಪ್ರವಾಸ, ಪ್ರಚಾರದರೀತಿ, ಸ್ಥಳ ಹಾಗೂ ದಿನಾಂಕ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296