nammatumakuru

    Subscribe to Updates

    Get the latest creative news from FooBar about art, design and business.

    What's Hot

    16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್

    January 9, 2026

    ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು

    January 9, 2026

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026
    Facebook Twitter Instagram
    ಟ್ರೆಂಡಿಂಗ್
    • 16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್
    • ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು
    • ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
    • ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
    • ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
    • ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
    • ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    ಜಿಲ್ಲಾ ಸುದ್ದಿ January 8, 2026

    ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ

    By adminJanuary 8, 2026No Comments2 Mins Read
    press

    ವರದಿ: ಹಾದನೂರು ಚಂದ್ರ

    ಎಚ್.ಡಿ.ಕೋಟೆ: ಸಾಮಾಜಿಕ ಜಾಲತಾಣ, ಎಲೆಕ್ಟ್ರಿಕ್ ಮಾಧ್ಯಮಗಳ ನಡುವೆಯೂ ಇಂದಿಗೂ ಮುದ್ರಣ ಮಾಧ್ಯಮಗಳು ಜನರ ನಂಬಿಕೆ ಮತ್ತು ವಿಶ್ವಾಸರ್ಹತೆಯನ್ನು ಉಳಿಸಿಕೊಂಡಿವೆ ಎಂದು ಕನ್ನಡಪ್ರಭ ದಿನ ಪತ್ರಿಕೆ ಸ್ಥಾನಿಕ ಸಂಪಾದಕ ಅಂಶಿ ಪ್ರಸನ್ನ ಕುಮಾರ್ ತಿಳಿಸಿದರು.


    Provided by
    Provided by

    ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ವನ್ಯಜೀವಿ ವಲಯದ ಕಾಕನಕೋಟೆ ಸಫಾರಿ ಕೇಂದ್ರದಲ್ಲಿ ಆಯೋಜಿಸಿದ್ದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಪತ್ರಕರ್ತರ ಸಂಘದ ಹೊರ ತಂದಿರುವ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತಿವಹಿಸಿ ಮಾತನಾಡಿದ ಅವರು, ಮಾಧ್ಯಮಗಳು ಜನರು ಮತ್ತು ಸರ್ಕಾರದ ನಡುವೆ ಸೇತುವೆಯಂತೆ ಕೆಲಸ ಮಾಡಬೇಕು. ಆ ಮೂಲಕ ಜನರ ನಂಬಿಕೆ ಸಂಪಾದಿಸಬೇಕು. ಸಮಸಮಾಜದ ನಿರ್ಮಾಣದ ಕನಸ್ಸಿಗೆ ಮಾಧ್ಯಮಗಳು ಶ್ರಮಿಸಬೇಕು ಎಂದರು.

    ಈ ತಾಲೂಕಿನಲ್ಲಿ ಪತ್ರಕರ್ತರು ಮತ್ತು ಶಾಸಕ ಸಂಬಂಧ ಉತ್ತಮವಾಗಿದೆ. ಅನಿಲ್ ಚಿಕ್ಕಮಾದು ಅವರು, ಪತ್ರಕರ್ತರಿಗೆ ಬೆಂಬಲವಾಗಿ ನಿಂತಿದ್ದಾರೆ. ಅವರ ತಂದೆ ಕೂಡ ಪತ್ರಕರ್ತರ ಪರ, ಸಮಾಜ ಪರವಾಗಿದ್ದರು. ಪತ್ರಕರ್ತರಲ್ಲಿ ನೈತಿಕತೆ ಇರಬೇಕು. ಯಾವುದೇ ಆಸೆಗಳಿಗೆ ಬಲಿಯಾಗದೆ, ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು.

    ಪತ್ರಕರ್ತರು ದಾಖಲೆಗಳನ್ನು ಇಟ್ಟುಕೊಂಡು ಸುದ್ದಿ ಮಾಡಬೇಕು. ದಾಖಲೆಗಳಿಲ್ಲದೇ ಯಾವುದೇ ವ್ಯಕ್ತಿಯ, ಸಂಸ್ಥೆಯ ತೇಜೋವಧೆ ಮಾಡಲು ಸಾಧ್ಯವಿಲ್ಲ.  ಆದರೆ, ಕೆಲ ಎಲೆಕ್ಟ್ರಾನಿಕ್ ಮಾಧ್ಯಮಗಳು ದುರುಪಯೋಗಪಡಿಸಿಕೊಂಡು ಯಾವುದೇ ದಾಖಲೆಗಳಿಲ್ಲದೇ ಸುದ್ದಿ ಮಾಡುತ್ತಿವೆ ಎಂದು ಬೇಸರಿಸಿದರು. ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ನಮ್ಮಲ್ಲಿನ ತಾಲೂಕು ಪತ್ರಕರ್ತರ ಸಂಘದಲ್ಲಿ ಬಹಳಷ್ಟು ಒಗ್ಗಟ್ಟಿದೆ. ನಾನು ಇಂದು ಸರ್ಕಾರದಲ್ಲಿ ಉತ್ತಮ ಸ್ಥಾನಮಾನ ಗಳಿಸಿದ್ದೇನೆ. ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿದ್ದೇನೆ ಎಂದರೆ ಅದಕ್ಕೆ ಪತ್ರಕರ್ತರ ಕೊಡುಗೆ ಅಪಾರ. ಪತ್ರಕರ್ತರು ನನಗೆ ಮಾರ್ಗದರ್ಶಕರಾಗಿದ್ದಾರೆ. ನನ್ನ ಕೆಲಸಗಳ ಬಗ್ಗೆ ನನಗೆ ಎಚ್ಚರಿಸುತ್ತಾರೆ. ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ನಾನು ಕ್ಷೇತ್ರದ ಬಗ್ಗೆ ತಿಳಿದುಕೊಂಡು ಆ ಮೂಲಕ ಕಾರ್ಯಪ್ರೌವೃತ್ತನಾಗುತ್ತೇನೆ ಎಂದರು.

    ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿದ್ದ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಆರ್. ನಾಗರಾಮ ಮಾತನಾಡಿದರು.

    ಈ ಸಂದರ್ಭ ಉಪಾಧ್ಯಕ್ಷರಾದ ದೊಡ್ಡಸಿದ್ದು ಹಾದನೂರು, ಪ್ರಧಾನ ಕಾರ್ಯದರ್ಶಿ ಬಿ.ನಿಂಗಣ್ಣ ಕೋಟೆ, ಕಾರ್ಯದರ್ಶಿ ಗಳಾದ ಪುಟ್ಟರಾಜು, ದಾಸೇಗೌಡ, ಖಂಜಾಂಚಿ ಜಿ.ರವಿಕುಮಾರ್, ನಿರ್ದೇಶಕರಾದ  ಚಂದ್ರು ಹಾದನೂರು, ರಂಗರಾಜು, ವಾಸೂಕಿ ನಾಗೇಶ್, ಸುರೇಶ್, ಶರವಣ, ಹಂಪಾಪುರ ನಾಗೇಶ್, ಸಂಘದ ಹಿರಿಯ ಸದಸ್ಯರಾದ ಬಸವರಾಜು,ಎಂ,ಎಲ್ ರವಿಕುಮಾರ್, ರಘು, ಜಶೀಲ, ರಾಜ್ಯ ವನ್ಯಜೀವಿ ಮಂಡಳಿ ನಿರ್ದೇಶಕ ವಡ್ಡರಗುಡಿ ಚಿಕ್ಕಣ್ಣ, ನೂರಲಕುಪ್ಪೆ  ಗ್ರಾ.ಪಂ.ಅಧ್ಯಕ್ಷೆ ಸುನೀತಾ ಮಹಾದೇವಸ್ವಾಮಿ, ಸಿಸಿಎಫ್ ರಮೇಶ್ ಕುಮಾರ್, ಅಂತರಸಂತೆ ವನ್ಯಜೀವಿ ವಲಯದ ಆರ್ ಎಫ್ ಒ ಎಸ್.ಸಿದ್ದರಾಜು, ತಾ.ಪಂ. ಮಾಜಿ ಸದಸ್ಯ ಸ್ಟ್ಯಾನಿ ಬಿಟ್ಟೋ, ಕಬಿನಿ ಹೇಮಂತ್ ಸೇರಿದಂತೆ  ಮುಂತಾದವರು ಹಾಜರಿದ್ದರು.

    ಕ್ಷೇತ್ರದಲ್ಲಿ ಜೋಡಿ ರಸ್ತೆ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದೇನೆ. ಈಗಾಗಲೇ ಸರ್ವೆಗಳು ಆರಂಭವಾಗಿವೆ. ಮುಂದಿನ ದಿನಗಳಲ್ಲಿ ಡಿಪಿಆರ್ ಸಿದ್ಧಪಡಿಸುವ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಿದ್ದೇನೆ. ಇದರ ಜತೆಗೆ ಕ್ಷೇತ್ರದ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ರೈತರಿಗೆ ಜಮೀನು ಮಂಜೂರಾತಿ ಬಗ್ಗೆಯೂ ಚರ್ಚಿಸಲಾಗುವುದು.

    –ಅನಿಲ್ ಚಿಕ್ಕಮಾದು, ಶಾಸಕರು, ಎಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    ಹೊಳೆನರಸೀಪುರ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್ ಭೇಟಿ: ಅಧಿಕಾರಿಗಳಿಗೆ ತರಾಟೆ

    January 6, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    16ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ: ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ, ನಾಗರಿಕರಿಗೆ ಹೆಮ್ಮೆಯ ವಿಷಯ: ಸಚಿವ ಡಾ.ಜಿ. ಪರಮೇಶ್ವರ್

    January 9, 2026

    ತುಮಕೂರು: ತುಮಕೂರು ನಗರದಲ್ಲಿ 2026 ಜನವರಿ 16 ರಿಂದ 22ರವರೆಗೆ ಕರ್ನಾಟಕ ಕ್ರೀಡಾಕೂಟ 2025–26 ನಡೆಯಲಿದೆ. ತುಮಕೂರು ಜಿಲ್ಲಾಡಳಿತ, ಯುವ…

    ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 5 ವರ್ಷ ಜೈಲು

    January 9, 2026

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.