nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ
    ಜಿಲ್ಲಾ ಸುದ್ದಿ February 10, 2022

    ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ

    By adminFebruary 10, 2022No Comments2 Mins Read
    pritham gowda

    ಹಾಸನ: ಸಚಿವ ಸಂಪುಟ ವಿಸ್ತರಣೆ ಸದ್ದು ಕೇಳಿಸುತ್ತಿದ್ದಂತೆಯೇ, ಶಾಸಕ ಪ್ರೀತಂ ಗೌಡ ಅವರ ಹೆಸರು ಕೇಳಿ ಬಂದಿದ್ದು, ಹಾಸನದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳ ಮೂಲಕ ಗಮನ ಸೆಳೆಯುತ್ತಿರುವ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ದೊರಕ ಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

    ಪ್ರೀತಂ ಗೌಡ ಅವರು ಜನಸಾಮಾನ್ಯರ ಕೈಗೆಟಕುವ ಶಾಸಕರಾಗಿದ್ದಾರೆ. ಜನರ ಯಾವುದೇ ಸಮಸ್ಯೆಗಳಿಗೂ ತಕ್ಷಣವೇ ಅವರು ಸ್ಪಂದಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಕ್ಕರೆ, ಕೇವಲ ಹಾಸನ ಮಾತ್ರವಲ್ಲದೇ ರಾಜ್ಯದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಹಾಸನ ನಗರ ಲಿಖಿತ್ ಗೌಡ ಅಭಿಪ್ರಾಯಪಟ್ಟಿದ್ದಾರೆ.


    Provided by
    Provided by

    ಪ್ರೀತಂ ಗೌಡ ಅವರು, ಹಾಸನದ ಅಭಿವೃದ್ಧಿಗಾಗಿ ದಿನನಿತ್ಯ ಶ್ರಮಿಸುತ್ತಿದ್ದಾರೆ. ನಗರದಲ್ಲಿ ಬೀದಿ ವ್ಯಾಪಾರಸ್ಥರಿಗೆ ಸಹಕಾರಿಯಾಗುವಂತೆ ತಮ್ಮ ಶಾಸಕರ ಅನುದಾನದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ. ಆಟೋ ಚಾಲಕರಿಗೆ ನೆರವಾಗುವ ನಿಟ್ಟಿನಲ್ಲಿ ಆಟೋ ಸ್ಟ್ಯಾಂಡ್ ನಿರ್ಮಾಣ ಮಾಡಿದ್ದಾರೆ ಎಂದು ಅವರು ಹೇಳಿದರು.

    ಈ ಹಿಂದೆ ಹಾಸನದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಸರಿಯಾದ ವ್ಯವಸ್ಥೆ ಇರಲಿಲ್ಲ. ಪ್ರೀತಂ ಗೌಡ ಅವರು ಬಹಳ ಮುತುವರ್ಜಿ ವಹಿಸಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದರು. ಆಟೋ ಚಾಲಕರಿಗೆ ಸರಿಯಾದ ಆಟೋ ಸ್ಟ್ಯಾಂಡ್ ಇರಲಿಲ್ಲ. ಆಟೋ ಚಾಲಕರು ಬಿರು ಬಿಸಿಲಿನಲ್ಲಿ ಆಟೋ ರಿಕ್ಷಾವನ್ನು ನಿಲ್ಲಿಸುವಂತಹ ಸ್ಥಿತಿಗಳಿದ್ದವು. ಈ ಸಮಸ್ಯೆಗಳನ್ನು ಮನಗಂಡ ಪ್ರೀತಂ ಗೌಡ ಅವರು ಆಟೋ ಚಾಲಕರಿಗೆ ಆಟೋ ಸ್ಟ್ಯಾಂಡ್ ಮಾಡಿಸಿಕೊಟ್ಟಿದ್ದಾರೆ ಎಂದು ಲಿಖಿತ್ ಹೇಳಿದರು.

    ಹಾಸನದಲ್ಲಿ ಪ್ರೀತಂ ಗೌಡ ನೇತೃತ್ವದಲ್ಲಿ ಹಲವಾರು ಕೆಲಸಗಳು ನಡೆಯುತ್ತಿವೆ. ಕೊವಿಡ್ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯಾರನ್ನೂ ಹಸಿವಿನಲ್ಲಿಡಬಾರದು ಎಂಬ ಧ್ಯೇಯದೊಂದಿಗೆ ಹಸಿದವರಿಗೆ  ಅನ್ನ ದೊರಕಿಸುವ ಕೆಲಸವನ್ನು ಪ್ರೀತಂ ಗೌಡ ಅವರು ಮಾಡಿದ್ದರು ಎಂದು ಲಿಖಿತ್ ಗೌಡ ತಿಳಿಸಿದರು.

    ಸಾರ್ವಜನಿಕ ಸೇವೆ ಮತ್ತು ಪಕ್ಷ ನಿಷ್ಠೆಗೆ ಇನ್ನೊಂದು ಹೆಸರಿದ್ದರೆ ಅದು ಪ್ರೀತಂ ಗೌಡ ಮಾತ್ರ. ಪಕ್ಷದ ಸ್ವಾಭಿಮಾನದ ಪ್ರಶ್ನೆಗಳು ಬಂದಾಗ ಯಾವುದೇ ಮುಲಾಜಿ ಇಲ್ಲದೇ ಅವರು ಧ್ವನಿ ಎತ್ತಿದವರು.  ಇದರ ಜೊತೆಗೆ ಸಹಾಯ, ಸಹನೆ, ಪ್ರೀತಿ, ವಿಶ್ವಾಸ, ಗುಣ,  ನಂಬಿಕೆ, ಗೌರವ, ಸಾಧನೆ  ಇದೆಲ್ಲದಕ್ಕೂ ಸಮನಾದ ಪದ ಎಂಬಂತೆ ತಮ್ಮ ನಡೆನುಡಿಗಳ ಮೂಲಕ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಹಾಸನ ಹಾಗೂ ಇಡೀ ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಬೇಕು. ಪ್ರೀತಂ ಗೌಡ ಅವರು ಯುವ ಬಿಜೆಪಿ ಕಾರ್ಯಕರ್ತರಿಗೆ ಮಾದರಿಯಾಗಿದ್ದಾರೆ. ಸಚಿವ ಸ್ಥಾನ ಪಡೆಯುವ ಎಲ್ಲ ಅರ್ಹತೆ, ಸಾಮಾಜಿಕ ಬದ್ಧತೆ ಅವರಿಗಿದೆ. ಅವರನ್ನು ಸಚಿವಸ್ಥಾನಕ್ಕೆ ಪರಿಗಣಿಸಬೇಕು ಎಂದು ಲಿಖಿತ್ ಗೌಡ ಒತ್ತಾಯಿಸಿದರು.

    admin
    • Website

    Related Posts

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 

    May 18, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ.…

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.