nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ಪರ ಸಂಘಟನೆಗಳಿಂದ ಕೇಂದ್ರ ಗೃಹ ಸಚಿವ ಹೇಳಿಕೆ ಖಂಡಿಸಿ ಪ್ರತಿಭಟನೆ
    ಕೊರಟಗೆರೆ December 19, 2024

    ದಲಿತ ಪರ ಸಂಘಟನೆಗಳಿಂದ ಕೇಂದ್ರ ಗೃಹ ಸಚಿವ ಹೇಳಿಕೆ ಖಂಡಿಸಿ ಪ್ರತಿಭಟನೆ

    By adminDecember 19, 2024No Comments2 Mins Read
    protest

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ: ಲೋಕಸಭಾ ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ತಾಲ್ಲೂಕು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಕಚೇರಿ ಆವರಣದಲ್ಲಿ ಕೇಂದ್ರ ಗೃಹ ಸಚಿವರನ್ನು ದೇಶದಿಂದ ಗಡಿಪಾರು ಮಾಡುವಂತೆ ಪ್ರತಿಭಟನೆ ಮೂಲಕ ಆಗ್ರಹಿಸಿ ಗ್ರೇಡ್–2 ತಹಶೀಲ್ದಾರ್ ರಾಮ್ ಪ್ರಸಾದ್ ಮುಖೇನಾ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಭಾರತದ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಲೋಕಸಭಾ ಸಂಸತ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ದೇಶದ ಎಲ್ಲಾ ದಲಿತ ಸಂಘ-ಸಂಸ್ಥೆಗಳು ಖಂಡಿಸುತ್ತೇವೆ. ದಲಿತರು ಶೋಷಣೆಗೆ ಒಳಗಾಗಿದ್ದಾಗ ಯಾವ ದೇವರು ಸಹ ನಮ್ಮನ್ನು ಕಾಪಾಡಲಿಲ್ಲ ಸಂವಿಧಾನವೊಂದೇ ದಲಿತರಿಗೆ ರಕ್ಷಣೆ ನೀಡಿ ಸಮಾನತೆ ಕಲ್ಪಿಸಿರುವುದು ಎಂದು ಆಕ್ರೋಶ ಹೊರಹಾಕಿದರು.

    ಸರ್ವ ಜನಾಂಗದವರು ಸಮಾನತೆ, ಸಹಬಾಳ್ವೆಯಿಂದ ಜೀವನ ನಡೆಸಲಿ ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎಂದು ವಿಶ್ವಜ್ಞಾನಿ ಅಂಬೇಡ್ಕರ್ರವರು ದೇಶಕ್ಕೆ ಸಂವಿಧಾನದ ಮೂಲಕ ಸ್ವತಂತ್ರವಾಗಿ ಜೀವಿಸುವಂತಹ ಹಕ್ಕನ್ನು ಕಲ್ಪಿಸಿದ್ದಾರೆ. ಕೂಡಲೇ ಕೇಂದ್ರ ಗೃಹ ಸಚಿವರು ನೀಡಿದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಬಾಬಾ ಸಾಹೇಬರಿಗೆ ಗೌರವ ಸಲ್ಲಿಸಿ ಗೃಹ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ದೇಶದಾದ್ಯಂತ ದಲಿತ ಪರ ಸಂಘಟನೆಗಳಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ. ದಲಿತ ವಿರೋಧಿ ಬಿಜೆಪಿಯು ದೇಶಕ್ಕೆ ಅಂಬೇಡ್ಕರ್ ರವರು ನೀಡಿರುವ ಸಂವಿಧಾನ ಮಹಾಗ್ರಂಥಕ್ಕೆ ಅಪಮಾನ ಮಾಡುತ್ತಿದ್ದಾರೆ. ಇತ್ತೀಚಿಗಷ್ಟೇ ಸಂಸತ್ತಿನ ಸದನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ದೇಶದಲ್ಲಿ ಕೋಮು ಗಲಭೆಗೆ ಕಾರಣವಾಗಿದೆ ಎಂದು ಕಿಡಿಕಾರಿದರು.

    ಡಾ.ಬಿ.ಆರ್ ಅಂಬೇಡ್ಕರ್ರವರು ಸಾಮಾಜಿಕ ಚಿಂತನೆಯನ್ನು ಒಳಗೊಂಡು ಹಲವು ರಾಷ್ಟ್ರಗಳ ಸಂವಿಧಾನ ಅಧ್ಯಯನ ನಡೆಸಿ ದೇಶಕ್ಕೆ ಸಂವಿಧಾನ ನೀಡಿದ್ದಾರೆ. ಅವರು ನೀಡಿರುವ ಸಂವಿಧಾನದ ಅಡಿಯಲ್ಲಿಯೇ ಕಾನೂನು ಸುವ್ಯವಸ್ಥೆ ನಿರ್ಮಾಣವಾಗಿರುವುದು.

    ಸಂವಿಧಾನದಿಂದಲೇ ಅಮಿತ್ ಶಾ ಜವಬ್ದಾರಿಯುತ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು, ಸಂವಿಧಾನ ವಿರೋಧಿ ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡುವಂತೆ ಎಂದು ಅಗ್ರಹ ಮಾಡಿದರು.

    ಈ ವೇಳೆ ಪ.ಪಂ ಸದಸ್ಯ ಕೆ.ಎನ್. ನಟರಾಜ್, ದಲಿತ ಮುಖಂಡರಾದ ಚಿಕ್ಕರಂಗಯ್ಯ, ಕಾಮರಾಜನಹಳ್ಳಿ ದೊಡ್ಡಯ್ಯ, ದಾಸರಹಳ್ಳಿ ಶಿವರಾಮ್, ಗುಂಡಿನಪಾಳ್ಯ ನರಸಿಂಹಮೂರ್ತಿ, ಮಾಜಿ ಸೈನಿಕ ನರಸಿಂಹಮೂರ್ತಿ, ಹೊಳವನಹಳ್ಳಿ ನರಸಿಂಹಮೂರ್ತಿ, ಗಂಗಣ್ಣ, ವಿಭೂತಿ ಸಿದ್ದಪ್ಪ, ಹರೀಶ್, ನಾಗರಾಜು, ನಾಗೇಶ್, ವೀರಕ್ಯಾತಯ್ಯ ಸೇರಿದಂತೆ ರೈತ ಪರ ಮತ್ತು ಪ್ರಗತಿಪರ ಚಿಂತಕರು ಹಾಜರಿದ್ದರು.

    ಸಂಘಟನೆಗಳಿಂದ ಉಗ್ರ ಹೋರಾಟದ ಎಚ್ಚರಿಕೆ:

    ಇತ್ತೀಚಿಗೆ ದೆಹಲಿಯ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆಯೇ ಅವಹೇಳನಕಾರಿ ಮಾತನಾಡಿದ್ದು, ಸಚಿವ ಅಮಿತ್ ಶಾ ಕೂಡಲೇ ಕ್ಷಮೆಯಾಚಿಸಿ, ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಂವಿಧಾನ ವಿರೋಧಿಯಾದ ಇವರನ್ನು ದೇಶದಿಂದಲೇ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಲಿತ ಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ದ ದೇಶದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಮುಖಂಡರು ಪ್ರತಿಭಟನೆಯಲ್ಲಿ ಎಚ್ಚರಿಕೆಯನ್ನು ನೀಡಿದರು.

    ಅಂಬೇಡ್ಕರ್ ಪೂರ್ವ ಘಟ್ಟದಲ್ಲಿ ದಲಿತರು ಶೋಷಣೆಗೆ ಒಳಪಟ್ಟಾಗ ಯಾವುದೇ ಧರ್ಮವಾಗಲಿ, ಯಾವುದೇ ದೇವರಾಗಲಿ ಕಾಪಾಡಲಿಲ್ಲ. ನಮ್ಮ ರಕ್ಷಣೆಗೆ ನಿಂತಿದ್ದು ಅಂಬೇಡ್ಕರ್ರವರು ರಚಿಸಿದ ಭಾರತದ ಸಂವಿಧಾನ ಒಂದೇ. ಸಂವಿಧಾನ ಕೊಡುಗೆ ನೀಡಿದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಕೂಡಲೇ ಅಮಿತ್ ಶಾ ಅಂಬೇಡ್ಕರ್ ಭಾವಚಿತ್ರ ಹಿಡಿದು ಸಾರ್ವಜನಿಕವಾಗಿ ಕ್ಷಮೇಯಾಚಿಸಿ, ತಮ್ಮ ಗೃಹ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

    –ಜೆಟ್ಟಿ ಅಗ್ರಹಾರ ನಾಗರಾಜು
    ರಾಜ್ಯ ಸಂಚಾಲಕ, ದಲಿತ ಸಂಘರ್ಷ ಸಮಿತಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ…

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.