ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧ ದಂಪತಿಯನ್ನು ಪುತ್ರನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 70 ವರ್ಷದ ರಾಮಕೃಷ್ಣಪ್ಪ ಮತ್ತು ಅವರ 65 ವರ್ಷದ ಪತ್ನಿ ಮುನಿರಾಮಕ್ಕ ಎಂದು ಗುರುತಿಸಲಾಗಿದೆ. ಆಸ್ತಿಯನ್ನು ತಮ್ಮ ಹೆಣ್ಣುಮಕ್ಕಳಿಗೂ ಹಂಚಲು ನಿರ್ಧರಿಸಿದ ನಂತರ ದಂಪತಿಯನ್ನು ಅವರ ಮಗ ನರಸಿಂಹನು ಕೊಂದಿದ್ದಾನೆ ಎಂದು ಶಂಕಿಸಲಾಗಿದೆ ಎಂದು ವರದಿ ಮಾಡಿದೆ.
ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಅವರಿಗೆ ನಾಲ್ವರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದನು. 17 ವರ್ಷಗಳ ಹಿಂದೆ ಮಗ ಮದುವೆಯಾದ ಹಿನ್ನೆಲೆಯಲ್ಲಿ ಸೂಲಿಬೆಲೆಯ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.
ಭಾನುವಾರ ಸಂಜೆ ವೃದ್ಧ ದಂಪತಿಯನ್ನು ಕಡಿದು ಹತ್ಯೆ ಮಾಡಲಾಗಿತ್ತು. ಮನೆಗೆ ಹೊರಗಿನಿಂದ ಬೀಗ ಹಾಕಿ ದಂಪತಿಯನ್ನು ಕೊಲೆ ಮಾಡಿ ಶಂಕಿತ ಆರೋಪಿ ಮನೆ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ದಂಪತಿಗೆ ಅವರ ಪುತ್ರಿಯೊಬ್ಬರು ಕರೆ ಮಾಡಿದಾಗ ಫೋನ್ ಸ್ವೀಕರಿಸದಿದ್ದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ದಂಪತಿಯ ಪುತ್ರಿಯೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಶಂಕಿತ ನರಸಿಂಹನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.