ಕಲಬುರಗಿ: ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗಿಸಲಾಗಿದೆ ಎಂದು ಆರೋಪಿಸಿ ಕಲಬುರಗಿಯ ಪರೀಕ್ಷಾ ಕೇಂದ್ರದ ಹೊರಗೆ ಬ್ರಾಹ್ಮಣ ಸಮುದಾಯದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.
ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವ ಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ.
ಜನಿವಾರ ತೆಗೆಸಿದ ಘಟನೆ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಬ್ರಾಹ್ಮಣ ಸಮಾಜದ ಕೆಲ ಮುಖಂಡರು ಪರೀಕ್ಷಾ ಕೇಂದ್ರದ ಸಮೀಪ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————