nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನೆ
    Uncategorized July 12, 2023

    ಮಧುಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನೆ

    By adminJuly 12, 2023No Comments2 Mins Read
    akshara dasoha

    ವರದಿ: ಅಬಿದ್ ಮಧುಗಿರಿ

    ಮಧುಗಿರಿ : ಪಟ್ಟಣದ ಖಾಸಗಿ ಬಸ್ ಸ್ಟಾಂಡ್ ಸಮೀಪದಲ್ಲಿ ತಾ. ಸಿ.ಐ.ಟಿ.ಯು ಅಧ್ಯಕ್ಷೇ ಎಸ್.ಡಿ ಪಾರ್ವತಮ್ಮ ನೇತೃತ್ವದಲ್ಲಿ ಅಕ್ಷರ ದಾಸೋಹ ಬಿಸಿ ಊಟ ತಯಾರಕರು ಸಮಾವೇಶಗೊಂಡು, ತಮ್ಮ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ತಾ.ಪಂ. ಕಚೇರಿವರೆಗೆ ಮೆರವಣಿಗೆ, ಪ್ರತಿಭಟನೆ ನಡೆಸಿ, ನಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.


    Provided by
    Provided by

    ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಇಲ್ಲದ ಸಂದರ್ಭ ಕಚೇರಿ ವ್ಯವಸ್ಥಾಪಕರಾದ ಶ್ರೀನಿವಾಸ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಅಕ್ಷರ ದಾಸೋಹ ನೌಕರರು ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಿದ್ದು, ನಾವು ತಾ.ಪಂ. ಮುಖಾಂತರ ಮತ್ತು ಜಿಲ್ಲಾಧಿಕಾರಿಗಳು ಸರ್ಕಾರದ ಹಂತಕ್ಕೆ ತಲುಪಿಸಲು ಕ್ರಮವಹಿಸಿ ಎಂದು ತಿಳಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಮಧುಗಿರಿ ತಾಲೂಕು ಸಮಿತಿ ಅಧ್ಯಕ್ಷೇ ನಾಗರತ್ನ ಮಾತನಾಡಿ, 2023 ರ ಬಜೆಟ್ ನಲ್ಲಿ ಹಿಂದಿನ ಸರ್ಕಾರ ಬಿಸಿ ಊಟ ನೌಕರರಿಗೆ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು, ಆದರೆ ಈ ಘೋಷಣೆಯಾದ ಗೌರವ ಧನ ಬಿಡುಗಡೆಗೆ ಆದೇಶ ಇನ್ನೂ ನೀಡಿಲ್ಲ ಸರಕಾರ ಕೂಡಲೇ ಆದೇಶ ಮಾಡಿ ಹಣ ಬಿಡುಗಡೆ ಮಾಡಬೇಕು, ಅಕ್ಷರ ದಾಸೋಹ ಮಾರ್ಗಸೂಚಿಯಲ್ಲಿ ನಾಲ್ಕು ಗಂಟೆ ಕೆಲಸ ಮಾತ್ರವಿದೆ, ಆದರೆ ದಿನ ನಿತ್ಯ ಆರು ಗಂಟೆಗಳ ಕೆಲಸ ಮಾಡುತ್ತಿದ್ದೇವೆ, ಆದ್ದರಿಂದ ಮಾರ್ಗದರ್ಶಿ ಕೈಪಿಡಿಯಲ್ಲಿ 6:00 ಕೆಲಸ ಎಂದು ತಿದ್ದುಪಡಿ ಮಾಡಬೇಕು.

    60 ವರ್ಷ ವಯಸ್ಸಾಗಿದೆ ಎಂದು ನಿವೃತ್ತಿಯ ಹೆಸರಿನಲ್ಲಿ ಏನು ಪರಿಹಾರ ಕೊಡದೆ ಸುಮಾರು ನೌಕರರನ್ನು ಕೆಲಸದಿಂದ ಕೈಬಿಟ್ಟಿದ್ದಾರೆ, ನಿವೃತ್ತಿ ಹೊಂದಿರುವ ಮತ್ತು ಹೊಂದುತ್ತಿರುವ ನೌಕರರಿಗೆ ಒಂದು ಲಕ್ಷ ಪರಿಹಾರ ನೀಡಬೇಕು ಮತ್ತು ಜಂಟಿ ಖಾತೆ ಜವಾಬ್ದಾರಿಯನ್ನು ಈ ಹಿಂದೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಮುಖ್ಯ ಅಡುಗೆಯವರು ನಿರ್ವಹಿಸಿಕೊಂಡು ಬರುತಿದ್ದರು ಆದರೆ ಈ ಜವಾಬ್ದಾರಿಯನ್ನು ಮುಖ್ಯ ಅಡುಗೆ ಅವರಿಂದ ಎಸ್. ಡಿ. ಎಂ. ಸಿ ಸಮಿತಿಯ ಅಧ್ಯಕ್ಷರಿಗೆ ವರ್ಗಾವಣೆ ಮಾಡಿ ಮುಖ್ಯ ಅಡುಗೆ ನೌಕರರಿಗೆ ಇರುವ ಹಕ್ಕನ್ನು ಕಿತ್ತುಕೊಂಡಿದ್ದಾರೆ.

    ಈ ಹಿಂದೆ ಇರುವ ಹಾಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಮತ್ತು ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು.

    ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ನೀಡಬೇಕು ಮತ್ತು ಅಡುಗೆ ನೌಕರರನ್ನು ಮಾರ್ಚ್ 31ಕ್ಕೆ ಅಧಿಕೃತವಾಗಿ ಇಲಾಖೆಯ ಆದೇಶದಂತೆ ಬಿಡುಗಡೆ ಮಾಡುತ್ತಾರೆ, ಆದರೆ ಏಪ್ರಿಲ್ 10 ರ ವರೆಗೆ ಕೆಲಸ ಮಾಡಿಸುತ್ತಾರೆ ಇವರ ಕರ್ತವ್ಯ ನಿರ್ವಹಿಸುವ ಹಾಗೆ ಮಾರ್ಚ್ 31ರ ಬದಲು ಏಪ್ರಿಲ್ 10 ಎಂದು ಆದೇಶಮಾಡಬೇಕು ಹಾಗೂ ಬಿಸಿಯೂಟ ಯೋಜನೆ ಯಾವುದೇ ಖಾಸಗಿ ಸಂಸ್ಥೆಗಳಿಗೆ ನೀಡಬಾರದು.
    ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯವರು ಇರಬೇಕು ಹಾಗೂ ಬಿಸಿಯೂಟ ನೌಕರರನ್ನು ‘ಡಿ’ ಗ್ರೂಪ್ ನೌಕರರಾಗಿ ಪರಿಗಣಿಸಬೇಕು ಎಂದು ತಿಳಿಸುತ್ತಾ ಮಾಧ್ಯಮ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಮ್ಮ, ಖಜಾಂಚಿ ಮಂಜುಳಾ. ಸಿ.ಐ.ಟಿ.ಯು ತಾ ಕಾರ್ಯದರ್ಶಿ ಸುಕನ್ಯ ಹಾಗೂ ಅಕ್ಷರ ದಾಸೋಹ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ವಿಡಿಯೋ ನೋಡಿ:

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ

    November 7, 2025

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.