nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನೆ
    Uncategorized July 12, 2023

    ಮಧುಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನೆ

    By adminJuly 12, 2023No Comments2 Mins Read
    akshara dasoha

    ವರದಿ: ಅಬಿದ್ ಮಧುಗಿರಿ

    ಮಧುಗಿರಿ : ಪಟ್ಟಣದ ಖಾಸಗಿ ಬಸ್ ಸ್ಟಾಂಡ್ ಸಮೀಪದಲ್ಲಿ ತಾ. ಸಿ.ಐ.ಟಿ.ಯು ಅಧ್ಯಕ್ಷೇ ಎಸ್.ಡಿ ಪಾರ್ವತಮ್ಮ ನೇತೃತ್ವದಲ್ಲಿ ಅಕ್ಷರ ದಾಸೋಹ ಬಿಸಿ ಊಟ ತಯಾರಕರು ಸಮಾವೇಶಗೊಂಡು, ತಮ್ಮ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ತಾ.ಪಂ. ಕಚೇರಿವರೆಗೆ ಮೆರವಣಿಗೆ, ಪ್ರತಿಭಟನೆ ನಡೆಸಿ, ನಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

    ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಇಲ್ಲದ ಸಂದರ್ಭ ಕಚೇರಿ ವ್ಯವಸ್ಥಾಪಕರಾದ ಶ್ರೀನಿವಾಸ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಅಕ್ಷರ ದಾಸೋಹ ನೌಕರರು ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಿದ್ದು, ನಾವು ತಾ.ಪಂ. ಮುಖಾಂತರ ಮತ್ತು ಜಿಲ್ಲಾಧಿಕಾರಿಗಳು ಸರ್ಕಾರದ ಹಂತಕ್ಕೆ ತಲುಪಿಸಲು ಕ್ರಮವಹಿಸಿ ಎಂದು ತಿಳಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಮಧುಗಿರಿ ತಾಲೂಕು ಸಮಿತಿ ಅಧ್ಯಕ್ಷೇ ನಾಗರತ್ನ ಮಾತನಾಡಿ, 2023 ರ ಬಜೆಟ್ ನಲ್ಲಿ ಹಿಂದಿನ ಸರ್ಕಾರ ಬಿಸಿ ಊಟ ನೌಕರರಿಗೆ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು, ಆದರೆ ಈ ಘೋಷಣೆಯಾದ ಗೌರವ ಧನ ಬಿಡುಗಡೆಗೆ ಆದೇಶ ಇನ್ನೂ ನೀಡಿಲ್ಲ ಸರಕಾರ ಕೂಡಲೇ ಆದೇಶ ಮಾಡಿ ಹಣ ಬಿಡುಗಡೆ ಮಾಡಬೇಕು, ಅಕ್ಷರ ದಾಸೋಹ ಮಾರ್ಗಸೂಚಿಯಲ್ಲಿ ನಾಲ್ಕು ಗಂಟೆ ಕೆಲಸ ಮಾತ್ರವಿದೆ, ಆದರೆ ದಿನ ನಿತ್ಯ ಆರು ಗಂಟೆಗಳ ಕೆಲಸ ಮಾಡುತ್ತಿದ್ದೇವೆ, ಆದ್ದರಿಂದ ಮಾರ್ಗದರ್ಶಿ ಕೈಪಿಡಿಯಲ್ಲಿ 6:00 ಕೆಲಸ ಎಂದು ತಿದ್ದುಪಡಿ ಮಾಡಬೇಕು.

    60 ವರ್ಷ ವಯಸ್ಸಾಗಿದೆ ಎಂದು ನಿವೃತ್ತಿಯ ಹೆಸರಿನಲ್ಲಿ ಏನು ಪರಿಹಾರ ಕೊಡದೆ ಸುಮಾರು ನೌಕರರನ್ನು ಕೆಲಸದಿಂದ ಕೈಬಿಟ್ಟಿದ್ದಾರೆ, ನಿವೃತ್ತಿ ಹೊಂದಿರುವ ಮತ್ತು ಹೊಂದುತ್ತಿರುವ ನೌಕರರಿಗೆ ಒಂದು ಲಕ್ಷ ಪರಿಹಾರ ನೀಡಬೇಕು ಮತ್ತು ಜಂಟಿ ಖಾತೆ ಜವಾಬ್ದಾರಿಯನ್ನು ಈ ಹಿಂದೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಮುಖ್ಯ ಅಡುಗೆಯವರು ನಿರ್ವಹಿಸಿಕೊಂಡು ಬರುತಿದ್ದರು ಆದರೆ ಈ ಜವಾಬ್ದಾರಿಯನ್ನು ಮುಖ್ಯ ಅಡುಗೆ ಅವರಿಂದ ಎಸ್. ಡಿ. ಎಂ. ಸಿ ಸಮಿತಿಯ ಅಧ್ಯಕ್ಷರಿಗೆ ವರ್ಗಾವಣೆ ಮಾಡಿ ಮುಖ್ಯ ಅಡುಗೆ ನೌಕರರಿಗೆ ಇರುವ ಹಕ್ಕನ್ನು ಕಿತ್ತುಕೊಂಡಿದ್ದಾರೆ.

    ಈ ಹಿಂದೆ ಇರುವ ಹಾಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಮತ್ತು ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು.

    ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ನೀಡಬೇಕು ಮತ್ತು ಅಡುಗೆ ನೌಕರರನ್ನು ಮಾರ್ಚ್ 31ಕ್ಕೆ ಅಧಿಕೃತವಾಗಿ ಇಲಾಖೆಯ ಆದೇಶದಂತೆ ಬಿಡುಗಡೆ ಮಾಡುತ್ತಾರೆ, ಆದರೆ ಏಪ್ರಿಲ್ 10 ರ ವರೆಗೆ ಕೆಲಸ ಮಾಡಿಸುತ್ತಾರೆ ಇವರ ಕರ್ತವ್ಯ ನಿರ್ವಹಿಸುವ ಹಾಗೆ ಮಾರ್ಚ್ 31ರ ಬದಲು ಏಪ್ರಿಲ್ 10 ಎಂದು ಆದೇಶಮಾಡಬೇಕು ಹಾಗೂ ಬಿಸಿಯೂಟ ಯೋಜನೆ ಯಾವುದೇ ಖಾಸಗಿ ಸಂಸ್ಥೆಗಳಿಗೆ ನೀಡಬಾರದು.
    ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯವರು ಇರಬೇಕು ಹಾಗೂ ಬಿಸಿಯೂಟ ನೌಕರರನ್ನು ‘ಡಿ’ ಗ್ರೂಪ್ ನೌಕರರಾಗಿ ಪರಿಗಣಿಸಬೇಕು ಎಂದು ತಿಳಿಸುತ್ತಾ ಮಾಧ್ಯಮ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಮ್ಮ, ಖಜಾಂಚಿ ಮಂಜುಳಾ. ಸಿ.ಐ.ಟಿ.ಯು ತಾ ಕಾರ್ಯದರ್ಶಿ ಸುಕನ್ಯ ಹಾಗೂ ಅಕ್ಷರ ದಾಸೋಹ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ವಿಡಿಯೋ ನೋಡಿ:

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026

    ಎಂ.ಬಾಲಕೃಷ್ಣ ನಾಯಕ್, ಮೂಡಬಿದಿರೆ ಭಾದ್ರಪದ ಶುಕ್ಲ ಚತುರ್ಥಿಯಂದು ಗಣೇಶ ಚತುರ್ಥಿ ಹಬ್ಬ ಬರುತ್ತದೆ. ಈ ಹಬ್ಬವನ್ನು ಗೌರಿ ಗಣೇಶ ಹಬ್ಬ…

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.