ಜಮಖಂಡಿ: ತಾಲೂಕಿನ ಮಧುರಖಂಡಿ ಗ್ರಾಮದ ಸಾಯಿ ಸಂಕಲ್ಪ ಕನ್ನಡ , ಆಂಗ್ಲ ಮಾಧ್ಯಮ ಹಿರಿಯ , ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ಮೂಡಲಗಿ ಗುರುಗಳು ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕ್ರೀಡೆಗಳಿಂದ ದೈಹಿಕ, ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ, ಯೋಗಾಸನಗಳ ಅವಶ್ಯಕತೆ ಇದೆ . ಆದಕಾರಣ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದ ದೇಶದ ಜನರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದ್ದರಿಂದ ಹೊರಬರಬೇಕಾದರೆ ಕ್ರೀಡೆ ಹಾಗೂ ಯೋಗಾಸನದಂತಹ ದೈಹಿಕ ಶ್ರಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
ವಾರ್ಷಿಕ ಕ್ರೀಡಾಕೂಟದಲ್ಲಿ 1 ರಿಂದ 5ನೇ ತರಗತಿ ಮಕ್ಕಳಿಗೆ ವಿಶೇಷ ಆಟಗಳನ್ನು ಆಡಿಸಿ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಮಹತ್ವವನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಬಿ.ಎಸ್.ಮಲಾಬಾದಿ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಆರ್.ಜಿ.ಮೋರಗಾಂವಕರ ,ಶಿಕ್ಷಕರ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಅಶೋಕ ಗುರಕೇರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB