nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಹೂ’ಕುಂಡ’ಲಿ ರಹಸ್ಯ!
    Uncategorized May 4, 2022

    PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಹೂ’ಕುಂಡ’ಲಿ ರಹಸ್ಯ!

    By adminMay 4, 2022No Comments2 Mins Read
    ips

    545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಬಗೆದಷ್ಟು ಬಯಲಾಗ್ತಿದೆ. ಇಷ್ಟು ದಿನ ಜ್ಞಾನಜ್ಯೋತಿ ಶಾಲೆಯ ಸುತ್ತಲೂ ಗಿರಕಿ ಹೊಡೆಯುತ್ತಿದ್ದ ಸಿಐಡಿ ಅಧಿಕಾರಿಗಳು ಮತ್ತೊಂದು ರಹಸ್ಯ ಬಿಚ್ಚಿಟ್ಟಿದ್ದಾರೆ. ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ ಅಕ್ರಮದ ಬಗ್ಗೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಆತನ ಹೇಳಿಕೆ ಆಧರಿಸಿ ಹೊರಟಿದ್ದ ಸಿಐಡಿ ಅಧಿಕಾರಿಗಳು ‘ಹೂಕುಂಡಲಿ’ ರಹಸ್ಯವನ್ನು ಭೇದಿಸಿದ್ದು, ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಂತಾಗಿದೆ.

    ಅಕ್ರಮದ ಕೇಂದ್ರ ಬಿಂದು ಆಗಿದ್ದ ಜ್ಞಾನ ಜ್ಯೋತಿ ಶಾಲೆಯಲ್ಲಿನ ಅಕ್ರಮದ ತನಿಖೆ ನಡೆಸುವ ವೇಳೆ ಸಿಐಡಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಕಲಬುರಗಿಯ ಇನ್ನೊಂದು ಕಾಲೇಜಿನ ಅಕ್ರಮವನ್ನು ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ ಬಾಯ್ಬಿಟ್ಟಿದ್ದಾನೆ. ನಗರದ MS ಇರಾನಿ ಕಾಲೇಜ್‌ನಲ್ಲಿ ನಡೆದ ಅಕ್ರಮದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಸಿಐಡಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ. ಕಿಂಗ್‌ಪಿನ್‌ ಆರ್‍ಡಿ ಪಾಟೀಲ್ ತನ್ನ ಅಡಿಟರ್ ಮೂಲಕ ಪರಿಚಯವಾದ ಕಲಬುರಗಿಯ ರಾಜಾಪುರ ಬಡಾವಣೆಯ ನಿವಾಸಿ ಪ್ರಭು ಅನ್ನೋ ಅಭ್ಯರ್ಥಿಗೆ ಬ್ಲೂಟೂತ್ ಮೂಲಕ ಎಂ.ಎಸ್.ಇರಾನಿ ಕಾಲೇಜ್‌ನಲ್ಲಿ ಪರೀಕ್ಷೆ ಬರೆಸಿರುವುದಾಗಿ ಸತ್ಯ ಕಕ್ಕಿದ್ದಾನೆ. ಇನ್ನು ಈ ಬಗ್ಗೆ ಸಿಐಡಿ ಡಿವೈಎಸ್ಪಿ ಪ್ರಕಾಶ್ ರಾಠೋಡ್ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

    ಪ್ರಕಾಶ್ ರಾಠೋಡ್ ದೂರಿನನ್ವಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ದೂರು ದಾಖಲಾಗ್ತಿದ್ದಂತೆ ಪೊಲೀಸರು ಆರ್‌ಡಿ ಪಾಟೀಲ್‌ನ ಅಡಿಟರ್ ಚಂದ್ರಕಾಂತ್ ಕುಲಕರ್ಣಿ, ಅಭ್ಯರ್ಥಿ ಪ್ರಭು ಮತ್ತು ಪ್ರಭು ತಂದೆ ಶರಣಪ್ಪ ಮೂವರನ್ನು ಬಂಧಿಸಿದ್ದಾರೆ. ಇನ್ನೂ ಅಕ್ರಮದಲ್ಲಿ ಬಂಧಿತನಾಗಿರುವ ಅಭ್ಯರ್ಥಿ ಪ್ರಭು ಪರೀಕ್ಷೆ ಬರೆದ ಕಾಲೇಜಿಗೆ ಕರೆದೊಯ್ದು ವೇಳೆ ತಾನು ಮಾಡಿದ್ದ ಕೃತ್ಯದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಪರೀಕ್ಷೆಯ ಮುನ್ನಾ ದಿನವೇ ಪರೀಕ್ಷಾ ಕೇಂದ್ರದ ಒಳಗಿರುವ ಹೂವಿನ ಕುಂಡದಲ್ಲಿ ಬ್ಲೂಟೂತ್ ಬಚ್ಚಿಟ್ಟು, ಪರೀಕ್ಷೆ ದಿನ ಬೆಳಗ್ಗೆ ಬೇಗ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕುಂಡದಲ್ಲಿರುವ ಬ್ಲೂಟೂತ್ ತೆಗೆದುಕೊಂಡು ಬಾತ್‌ರೂಮ್‌ಗೆ ಹೋಗಿ ಒಳ ಉಡುಪಿನಲ್ಲಿ ಬ್ಲೂಟೂತ್ ಇಟ್ಟುಕೊಂಡಿದ್ದನಂತೆ.

    ತದನಂತರ ಪರೀಕ್ಷಾ ಕೇಂದ್ರದ ಒಳಗೆ ಹೋಗಿ ಬ್ಲೂಟೂತ್ ಆನ್ ಮಾಡಿಕೊಂಡು ಅಕ್ರಮವಾಗಿ ಪರೀಕ್ಷೆ ಬರೆದಿರೋದಾಗಿ ಅಕ್ರಮದ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ. ಇಲ್ಲಿ ಇನ್ನೊಂದು ವಿಶೇಷ ಅಂದ್ರೆ ಮಗನನ್ನು ಪಿಎಸ್‌ಐ ಮಾಡೋಕೆ ಪ್ರಭು ತಂದೆ ಶರಣಪ್ಪ 50 ಲಕ್ಷ ರೂ. ನೀಡಿರೋ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ಪ್ರಭು ಡಿಗ್ರಿ ಮುಗಿಸಿದ ಬಳಿಕ ಆತನಿಗೊಂದು ಸರ್ಕಾರಿ ನೌಕರಿ ಮಾಡಿಸುವಂತೆ ಆರ್‌ಡಿ ಪಾಟೀಲ್‌ನ ಅಡಿಟರ್ ಚಂದ್ರಕಾಂತ್ ಕುಲಕರ್ಣಿಗೆ ಪ್ರಭು ತಂದೆ ಶರಣಪ್ಪ ಮನವಿ ಮಾಡಿದ್ದನಂತೆ. ಇದಾದ ಬಳಿಕ ಅಡಿಟರ್‌ ಚಂದ್ರಕಾಂತ್‌ ತನ್ನ ಅಕ್ರಮದ ಗುರು, ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ನನ್ನು ಪರಿಚಯ ಮಾಡಿಸಿಕೊಟ್ಟಿದ್ದಾನೆ. ಇದೇ ವೇಳೆ 50 ಲಕ್ಷ ರೂ.ಗೆ ಪಿಎಸ್‌ಐ ಹುದ್ದೆಯ ಡೀಲ್‌ ಆಗಿ, ಅಡ್ವಾನ್ಸ್‌ ಕೊಟ್ಟು ಬಂದಿದ್ದ ಇದೇ ಪ್ರಭು ತಂದೆ ಶರಣಪ್ಪ.

    ಅದರಂತೆ ಮಗ ಪಿಎಸ್ಐ ಆಗ್ತಾನೆ ಅಂತಾ ಕನಸು ಕಂಡಿದ್ದ ಪ್ರಭು ತಂದೆ ಶರಣಪ್ಪ ಇರೋ ಮನೆ ಸೈಟ್ ಮಾರಾಟ ಮಾಡಿ ಆರ್‌ಡಿ ಪಾಟೀಲ್‌ಗೆ ಲಕ್ಷ ಲಕ್ಷ ಹಣ ನೀಡಿದ್ದಾನಂತೆ. ಆದರೆ, ದುರಂತ ನೋಡಿ ಕೊಟ್ಟ ಹಣವು ಹೋಯ್ತು, ಮಗನಿಗೆ ಪಿಎಸ್‌ಐ ನೌಕರಿಯೂ ಸಿಗದೇ ಇಬ್ಬರೂ ಜೈಲುಪಾಲಾಗಿದ್ದಾರೆ. ಸದ್ಯ ಸಿಐಡಿ ಅಕ್ರಮ ನೇಮಕಾತಿಯಲ್ಲಿ ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇದಷ್ಟೇ ಅಲ್ಲದೇ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಆರಂಭದಿಂದಲೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಓರ್ವ ಡಿವೈಎಸ್‌ಪಿಯ ಮೊಬೈಲ್ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ.

    PSI ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಹೊರ ಬೀಳುತ್ತಿವೆ. ತನಿಖೆ ವೇಳೆ ಎಮ್‌ಎಸ್‌ಐ ಇರಾನಿ ಕಾಲೇಜ್‌ನಲ್ಲಿ ಪರೀಕ್ಷೆ ಬರೆದವರಲ್ಲಿ 8 ಜನ ಅಭ್ಯರ್ಥಿಗಳು ಪಾಸ್ ಆಗಿದ್ದಾರೆ. ಅದರಲ್ಲಿ ಅಕ್ರಮವಾಗಿ ಬರೆದ ಓರ್ವ ಅಭ್ಯರ್ಥಿ ಈಗಾಗಲೇ ಅರೆಸ್ಟ್ ಆಗಿದ್ದಾನೆ. ಒಟ್ನಲ್ಲಿ ಅಕ್ರಮದ ಹಿಂದಿರುವ ಒಬ್ಬರ ಹಿಂದೊಬ್ಬರಂತೆ ಆರೋಪಿಗಳನ್ನು ಸಿಐಡಿ ಹೆಡೆಮುರಿಕಟ್ಟುತ್ತಿದ್ದು, ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆಯಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.